ಬೆಂಗಳೂರು: 2023ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ. ಏಕೆಂದರೆ ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ ಇದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಟೀಕಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಸರ್ಕಾರವನ್ನು ತರುವುದು ನಮ್ಮ ಗುರಿಯಾಗಿದೆ. ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಈ ಸರ್ಕಾರದ ಜೊತೆಗೆ ಹೋರಾಡಲು ಆಗಲ್ಲ, ಸುಮ್ಮನಿರಲು ಆಗಲ್ಲ ಎಂದು ವ್ಯಂಗ್ಯವಾಡಿದರು.
ಈ ಸರ್ಕಾರವು ಹೆಂಗಸರಾದರೆ ಹೆಂಗಸರನ್ನು ಕಳಿಸಬಹುದು. ಗಂಡಸರಾದರೆ ಗಂಡಸರನ್ನು ಕಳಿಸಬಹುದು. ಆದರೆ ಇವರು ಎರಡೂ ಅಲ್ಲ, ಭಾಷಾ ಅಂತ ಚಪ್ಪಾಳೆ ತಟ್ಟಿಬಿಡ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಅಂತ ನಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ವಿಧಾನ ಪರಿಷ್ ಸ್ಥಾನಕ್ಕೆ ಟಿಕೆಟ್ ಸಿಗದಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ ಎಂದು ಪ್ರಶ್ನಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…