ಬೆಳಗಾವಿ: “2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಾತ್ರವಲ್ಲ, ಯಾವುದೇ ಕಾಯ್ದೆ ಜಾರಿಗೆ ತಂದಲ್ಲಿ ನಾವು ವಾಪಸ್ ಪಡೆಯುತ್ತೇವೆ. ಇದನ್ನು ನಾನು ಅನ್ ರೆಕಾರ್ಡ್ ಹೇಳುತ್ತಿದ್ದೇನೆ” ಎಂದಿದ್ದಾರೆ.
“ಬಿಜೆಪಿಯಲ್ಲಿ ಸಂಖ್ಯಾಬಲವಿದ್ದು, ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವುದು ಮುಖ್ಯ. ವಿಧೇಯಕವನ್ನು ಮತಕ್ಕೆ ಹಾಕುವ ಪ್ಲಾನ್ ನಡೆಯುತ್ತಿದೆ. ನಮಗೆ ವಿಧಾನಸಭೆಯಲ್ಲಿ ಅಗತ್ಯ ಸಂಖ್ಯಾಬಲವಿಲ್ಲ. ಆದರೆ, ನಮಗೆ ವಿಧಾನ ಪರಿಷತ್ನಲ್ಲಿ ಬಹುಮತವಿದೆ” ಎಂದು ಹೇಳಿದ್ದಾರೆ.
ಈ ಸಂದರ್ಭ ಜೆಡಿಎಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, “ಜೆಡಿಎಸ್ ವಿಧಾನಸಭೆಯಲ್ಲಿ ಹೇಳುವುದು ಒಂದು ಮಾಡುವುದು ಇನ್ನೊಂದು. ವಿಧೇಯಕ ಮಂಡನೆಯ ಸಂದರ್ಭ ವಿರೋಧ ಮಾಡುತ್ತಾರೆ. ಕೊನೆಯ ಹಂತದಲ್ಲಿ ಕೈಕೊಡುತ್ತಾರೆ. ಸಭಾತ್ಯಾಗ ಮಡುವುದು ಸಹ ಬಿಜೆಪಿಗೆ ಬೆಂಬಲಿಸಿದಂತೆ” ಎಂದಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…