ಪಾವಗಡ: ಜಾತ್ಯತೀತ ಜನತಾದಳ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ. ಬಡವರ ಶೋಷಿತರ ಪರವಾದ ಪಕ್ಷ. 2023ಕ್ಕೆ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಜಾತ್ಯತೀತ ಜನತಾದಳ ಪಾವಗಡ ವತಿಯಿಂದ ಹಮ್ಮಿಕೊಂಡಿದ್ದ ನೂತನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜೆಡಿಎಸ್ ಎಂದೆಂದಿಗೂ ರೈತರ, ಶೋಷಿತರ, ಬಡವರ ಪರವಿರುತ್ತದೆ. ದೇವೇಗೌಡರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ, 2023ಕ್ಕೆ ನಿಮ್ಮೆಲ್ಲರ ಸಹಕಾರ, ಕಠಿಣ ಪರಿಶ್ರಮ ಪಕ್ಷ ಸಂಘಟನೆಯಿಂದ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದ್ದಾರೆ ಎಂದರು.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಒಪ್ಪಲಿಲ್ಲ. ಆದರೂ 1 ಲಕ್ಷದವರೆಗಿನ ಸಾಲಮನ್ನಾ ಮಾಡಿದ್ದು ಕುಮಾರಸ್ವಾಮಿ. ಸ್ತ್ರೀಶಕ್ತಿ ಸಂಘಗಳ, ಬಡವರ, ಬೀದಿಬದಿ ವ್ಯಾಪಾರಿಗಳ ಹಾಗೂ ಬ್ಯಾಂಕ್ ಹಾಗೂ ಕೈಸಾಲ ಮಾಡಿದ ರೈತರಿಗೆ ಬಡ್ಡಿದಾರರ ಕಿರುಕುಳ ತಪ್ಪಿಸಿದ್ದು ಕುಮಾರಸ್ವಾಮಿ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಹೆರಿಗೆಗೂ ಮುನ್ನ ಹಾಗೂ ನಂತರ 6 ತಿಂಗಳ ಕಾಲ ಪ್ರತಿ ತಿಂಗಳು 6 ಸಾವಿರ ನೀಡಿದ್ದು ಯಾರು? ನಾನು ಮುಖ್ಯಮಂತ್ರಿಯಾದ ವೇಳೆ ಎಲ್ಲಾ ಸಮುದಾಯಗಳಿಗೂ ಮೀಸಲು ಕಲ್ಪಿಸಿದೆ. ಅಂದೇ ಗ್ರಾಪಂ, ತಾಪಂ, ಜಿಪಂ, ಮಹಾನಗರ ಪಾಲಿಕೆಗಳಲ್ಲಿ ಶೇ.33 ಮಹಿಳೆಯರಿಗೆ ಮೀಸಲು ಕಲ್ಪಿಸಿದ್ದು ಕೂಡ ಇದೇ ದೇವೇಗೌಡರು ಎಂದರು.
ತಾಲೂಕಿನ 17 ಗ್ರಾಪಂಗಳಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಕೆ.ಎಂ.ತಿಮ್ಮರಾಯಪ್ಪ ಮಾಜಿ ಶಾಸಕರಾದರೂ ಪಕ್ಷದ ವರ್ಚಸ್ಸು ಹೆಚ್ಚಿಸಿದ್ದಾರೆ. 200 ಮತಗಳ ಅಂತರದಲ್ಲಿ ತಿಮ್ಮರಾಯಪ್ಪ ಸೋತಿದ್ದು ದುರಂತ. 2023ಕ್ಕೆ ಗೆಲ್ಲಿಸಿ, ಸಚಿವರಾಗಿ ಬರಲಿದ್ದಾರೆ ಎಂದರು.
ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…