ಪಾವಗಡ: ಜಾತ್ಯತೀತ ಜನತಾದಳ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ. ಬಡವರ ಶೋಷಿತರ ಪರವಾದ ಪಕ್ಷ. 2023ಕ್ಕೆ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಜಾತ್ಯತೀತ ಜನತಾದಳ ಪಾವಗಡ ವತಿಯಿಂದ ಹಮ್ಮಿಕೊಂಡಿದ್ದ ನೂತನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜೆಡಿಎಸ್ ಎಂದೆಂದಿಗೂ ರೈತರ, ಶೋಷಿತರ, ಬಡವರ ಪರವಿರುತ್ತದೆ. ದೇವೇಗೌಡರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ, 2023ಕ್ಕೆ ನಿಮ್ಮೆಲ್ಲರ ಸಹಕಾರ, ಕಠಿಣ ಪರಿಶ್ರಮ ಪಕ್ಷ ಸಂಘಟನೆಯಿಂದ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದ್ದಾರೆ ಎಂದರು.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಒಪ್ಪಲಿಲ್ಲ. ಆದರೂ 1 ಲಕ್ಷದವರೆಗಿನ ಸಾಲಮನ್ನಾ ಮಾಡಿದ್ದು ಕುಮಾರಸ್ವಾಮಿ. ಸ್ತ್ರೀಶಕ್ತಿ ಸಂಘಗಳ, ಬಡವರ, ಬೀದಿಬದಿ ವ್ಯಾಪಾರಿಗಳ ಹಾಗೂ ಬ್ಯಾಂಕ್ ಹಾಗೂ ಕೈಸಾಲ ಮಾಡಿದ ರೈತರಿಗೆ ಬಡ್ಡಿದಾರರ ಕಿರುಕುಳ ತಪ್ಪಿಸಿದ್ದು ಕುಮಾರಸ್ವಾಮಿ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಹೆರಿಗೆಗೂ ಮುನ್ನ ಹಾಗೂ ನಂತರ 6 ತಿಂಗಳ ಕಾಲ ಪ್ರತಿ ತಿಂಗಳು 6 ಸಾವಿರ ನೀಡಿದ್ದು ಯಾರು? ನಾನು ಮುಖ್ಯಮಂತ್ರಿಯಾದ ವೇಳೆ ಎಲ್ಲಾ ಸಮುದಾಯಗಳಿಗೂ ಮೀಸಲು ಕಲ್ಪಿಸಿದೆ. ಅಂದೇ ಗ್ರಾಪಂ, ತಾಪಂ, ಜಿಪಂ, ಮಹಾನಗರ ಪಾಲಿಕೆಗಳಲ್ಲಿ ಶೇ.33 ಮಹಿಳೆಯರಿಗೆ ಮೀಸಲು ಕಲ್ಪಿಸಿದ್ದು ಕೂಡ ಇದೇ ದೇವೇಗೌಡರು ಎಂದರು.
ತಾಲೂಕಿನ 17 ಗ್ರಾಪಂಗಳಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಕೆ.ಎಂ.ತಿಮ್ಮರಾಯಪ್ಪ ಮಾಜಿ ಶಾಸಕರಾದರೂ ಪಕ್ಷದ ವರ್ಚಸ್ಸು ಹೆಚ್ಚಿಸಿದ್ದಾರೆ. 200 ಮತಗಳ ಅಂತರದಲ್ಲಿ ತಿಮ್ಮರಾಯಪ್ಪ ಸೋತಿದ್ದು ದುರಂತ. 2023ಕ್ಕೆ ಗೆಲ್ಲಿಸಿ, ಸಚಿವರಾಗಿ ಬರಲಿದ್ದಾರೆ ಎಂದರು.
ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…