2023ರಲ್ಲಿ ಜೆಡಿಎಸ್‌‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದೇನೆ. ಅದಕ್ಕಾಗಿ ಹೋರಾಟ ಮಾಡಲು ಸಿದ್ದ : ಎಚ್​ ಡಿ ದೇವೇಗೌಡ -Vishwanews24

ಬೆಂಗಳೂರು: 2023ರಲ್ಲಿ ಜೆಡಿಎಸ್​ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದೇನೆ. ನಾನು ಹೋರಾಟ ಮಾಡುತ್ತೇನೆ, ನನಗೆ ವಯಸ್ಸು 82 ಇರಬಹುದು, ಆದರೆ ಆ ವಯಸ್ಸು ನನಗೆ ಯಾವುದೇ ಅಡ್ಡಿ ಆಗಲ್ಲ ಎಂದು ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೋಸ್ಕರ ಯಾರಿ ಸಾಯುತ್ತೇನೆ ಅನ್ನುತ್ತಾನೋ ಅಂತವರನ್ನು ತಂದು ಪಕ್ಷಕ್ಕೆ ಕಟ್ಟುತ್ತೇನೆ. ನಾನು ಹೋರಾಟ ಮಾಡುತ್ತೇನೆ. ನನ್ನ ವಯಸ್ಸು 82 ಆಗಿರಬಹುದು. ಆ ವಯಸ್ಸು ನನಗೆ ಅಡ್ಡಿಯಾಗುವುದಿಲ್ಲ. 2023ರಲ್ಲಿ ಜೆಡಿಎಸ್‌‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದೇನೆ. ಅದಕ್ಕಾಗಿ ಹೋರಾಟ ಮಾಡಲು ಸಿದ್ದ ಎಂದು ಹೇಳಿದರು.

ಸದ್ಯ ಜನತಾ ಪರಿವಾರದ ಹಲವು ನಾಯಕರು ಬೇರೆ ಬೇರೆ ಪಕ್ಷಗಳಲ್ಲಿದ್ದಾರೆ. ಅವರೆನ್ನಲ್ಲಾ ಒಗ್ಗೂಡಿಸುವಂತೆ ನಾಯಕರು ಮನವಿ ಮಾಡಿದ್ದಾರೆ. ಕೆಲ ರಾಷ್ಟ್ರೀಯ ನಾಯಕರು ನನ್ನನ್ನು ಸಂಪರ್ಕಿಸಿದ್ದು, ಒಗ್ಗೂಡುವಂತೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ನಮಗೆ ಸಮಯಾವಕಾಶ ಬೇಕು. ಡಿಸೆಂಬರ್ 2020ರೊಳಗೆ ನಮ್ಮ‌ ಪಕ್ಷಕ್ಕೆ ಯಾರೆಲ್ಲಾ ಬರುತ್ತಾರೆ ಅವರೆನ್ನೆಲ್ಲಾ ಒಗ್ಗೂಡಿಸಲು ಯತ್ನಿಸಲಾಗುತ್ತದೆ. ಜನತಾ ಪರಿವಾರದಲ್ಲಿದ್ದ ಹಲವು‌ ನಾಯಕರನ್ನು ಒಗ್ಗೂಡಿಸಲು ಪ್ರಯತ್ನಿಸುವಂತೆ ನನಗೆ ಸಲಹೆ ನೀಡಿದ್ದಾರೆ ಎಂದರು.

ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಅನೇಕ ಜನ ನನ್ನ ಸ್ನೇಹಿತರಿದ್ದಾರೆ. ಅವರ್‍ಯಾರಿಗೂ ಕೂಡ ಆ ಎರಡು ಪಕ್ಷದಲ್ಲಿ ಇರೋಕೆ ಇಷ್ಟ ಇಲ್ಲ. ಆದರೆ ಕೆಲವು ಅಧಿಕಾರಶಾಹಿಗಳಿಗೆ ಹೆದರಿ ಆ ಪಕ್ಷದಲ್ಲಿ ಇದ್ದಾರೆ. ಇದು ತಮಾಷೆಯ ಮಾತಲ್ಲ. ನನ್ನ ಜೊತೆ ಅವರು ಹಂಚಿಕೊಂಡಿರುವ ಅಭಿಪ್ರಾಯವನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು.

ಪಕ್ಷದ ಸಂಘಟನೆಗಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ. ನಾನು ಹೋರಾಟ ಮಾಡಲು ಸಿದ್ಧನಿದ್ದೇನೆ. ಯಾರಿಗೂ ಹೆದರುವ ಅಗತ್ಯ ಇಲ್ಲ.‌ ಮಂತ್ರಿಗಳಿಗೆ, ಪೊಲೀಸರಿಗೆ ಹೆದರುವ ಅಗತ್ಯ ಇಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ಕೈ ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ 45,000 ಮಹಿಳೆಯರನ್ನು ಒಟ್ಟುಗೂಡಿಸಿ ಅರಮನೆ ಮೈದಾನದಲ್ಲಿ ಮಹಿಳಾ ಸಮಾವೇಶ ಮಾಡಲಿದ್ದೇವೆ ಎಂದು ಹೇಳಿದರು.

ಜೆಡಿಎಸ್​ ಪಕ್ಷವನ್ನು ಮುಗಿಸಬೇಕು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ಸೋಲಿನ ಉತ್ತರ ಈಗ ಕೊಡುವುದಿಲ್ಲ. 1989ರಲ್ಲಿ ನನ್ನನ್ನೇ ಪಕ್ಷದಿಂದ ಹೊರಗೆ ಹಾಕಿದ್ದರು. ಆಗ ಯಾವ ಸ್ನೇಹಿತರೂ ನನ್ನ ಜೊತೆ ಉಳಿಯಲಿಲ್ಲ. ಯಾರೂ ಸಹ ಹಣ ಕೊಡಲಿಲ್ಲ. ನಾನು ನನ್ನ ನಾದಿನಿ ಮನೆ ಮಾಡಿ ಪಕ್ಷ ಕಟ್ಟಿದೆ ಎಂದು ತಿಳಿಸಿದರು.

ನನಗೆ ಆ ಸಂದರ್ಭ ಪಕ್ಷ ಕಟ್ಟುವ ಛಲ ನನ್ನಲ್ಲಿತ್ತು. ಹಾಗಾಗಿ 1994ರಲ್ಲಿ ಪಕ್ಷವನ್ನು ಕಟ್ಟಿ ಪಕ್ಷದ ಅಧ್ಯಕ್ಷನಾದೆ. ಆ ಸಂದರ್ಭ ಯಾರೊಬ್ಬನೂ ನನಗೆ ಸಹಾಯ ಮಾಡಲಿಲ್ಲ. ಪಿ ಜಿ ಆರ್ ಸಿಂಧ್ಯ ಸೇರಿದಂತೆ ಕೆಲವರು ಮಾತ್ರ ಸಹಾಯ ಮಾಡಿದರು. ಆ ನಂತರ ನನ್ನ ಮೇಲೆ ತನಿಖೆ ನಡೆಸಿದರು. ಆದರೆ ನಾನು ಯಾರಿಗೂ ಹೆದರುವುದಿಲ್ಲ. ನನ್ನ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೇಳಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago