ಬೆಂಗಳೂರು : ಇಂದಿನಿಂದಲೇ ಜೆಡಿಎಸ್ ಪಕ್ಷದ ಸಂಘಟನೆ ಕೆಲಸ ಆರಂಭವಾಗಿದೆ. ಸಂಕ್ರಾಂತಿ ಹಬ್ಬದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಲು ನಿರ್ಧಾರ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದು ಮೊದಲ ಸಭೆ ನಡೆದಿದ್ದು, 2023ರಲ್ಲಿ ರಾಜ್ಯವನ್ನು ಜೆಡಿಎಸ್ ರಾಜ್ಯವನ್ನಾಗಿ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ. ಅಲ್ಲದೆ, ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರ್ಯವಾಗಿ ಸ್ಪರ್ಧಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮುಗಿದಿದ್ದು, ಫಲಿತಾಂಶಗಳು ಹೊರ ಬಿದ್ದಿವೆ. ಈ ಚುನಾವಣೆಯಲ್ಲಿ ಜೆಡಿಎಸ್ ಸಾಧನೆ ತನಗೆ ತೃಪ್ತಿ ನೀಡಿದೆ ಎಂದು ತಿಳಿಸಿರುವ ಕುಮಾರಸ್ವಾಮಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಏರಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಇಂದು ಸುದ್ದಿಗಾರರ ಜೊತೆಗೆ ಮಾತನಾಡಿರುವ ಕುಮಾರಸ್ವಾಮಿ, “ಸಂಕ್ರಾಂತಿ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ತರಲು ನಿರ್ಧಾರ ಮಾಡಿದ್ದೇವೆ. ಆ ಹಿನ್ನೆಲೆಯಲ್ಲಿ ಇಂದು ಮೊದಲ ಸಭೆ ನಡೆಸಿದ್ದೇವೆ. ಜೆಡಿಎಸ್ ಅನ್ನು ಯಾವುದೇ ಪಕ್ಷದೊಂದಿಗೆ ವಿಲೀನಗೊಳಿಸುವ ಅಥವಾ ಬೆಂಬಲಿಸುವ ಉದ್ದೇಶ ಇಲ್ಲ. ಸೀಟು ಹೊಂದಾಣಿಕೆ ವಿಚಾರವೂ ನಮ್ಮ ಮುಂದೆ ಇಲ್ಲ. ಇವತ್ತಿನ ಬಿಜೆಪಿ ಆಡಳಿತ ಮತ್ತು ಕಾಂಗ್ರೆಸ್ ನಡವಳಿಕೆಯೂ ನನಗೆ ಗೊತ್ತು.
ಆರಂಭದಲ್ಲಿ ಬಿಜೆಪಿಯವರು ಗ್ರಾಮ ಸ್ವರಾಜ್ಯ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಪಾಪದ ಹಣ ಚೆಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಿದೆ. ಹಣದ ಮೂಲಕ ಅಧಿಕಾರ ಹಿಡಿಯಲು ಹೊರಟಿದ್ದಾರೆ. ಇವತ್ತಿನ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ಸಿಗುತ್ತಿಲ್ಲ. ಜೆಡಿಎಸ್ ನ ಸ್ವಾಭಿಮಾನವನ್ನ ಬೇರೆ ಪಕ್ಷಕ್ಕೆ ಅಡ ಇಡಲು ಸಾಧ್ಯವಾ..? ಮುಂದಿನ 2023ರ ವೇಳೆಗೆ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಗೆ ಸ್ವಂತಂತ್ರವಾಗಿ ಅಧಿಕಾರ ಕೊಟ್ರೆ. ಏನೆಲ್ಲಾ ಕೆಲಸ ಮಾಡ್ತೀವಿ ಎಂಬ ಯೋಜನೆ ಮುಂದಿಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
“ನಮ್ಮ ಪಕ್ಷ ಮುಗಿದೇ ಹೋಯ್ತು ಎಂದು ಹೇಳ್ತಾರೆ. ಬಿ ಜೆ ಪಿ ಅಧ್ಯಕ್ಷರು ಶೇ 50 ರಷ್ಟು ಸ್ಥಾನ ಗೆದ್ದಿದ್ದೇವೆ ಎಂದು ಹೇಳ್ತಾರೆ. ಕಾಂಗ್ರೆಸ್ ನವರು ನಾವು ಹೆಚ್ಚಿನ ಸ್ಥಾನ ಗೆದ್ದಿದ್ದೇವೆ ಎಂದು ಹೇಳ್ತಾರೆ. ಆದರೆ ನಾವು ಆ ರೀತಿ ಹೇಳೂಲ್ಲ. ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನಿಜವಾದ ರಾಜಕೀಯ ಅಖಾಡ ಸಿದ್ದವಾಗಲಿದೆ. ಈ ಅಖಾಡ ಮುಂದಿನ ರಾಜಕೀಯ ದಿಕ್ಸೂಚಿಯಾಗಿ ಬದಲಾಗಲಿದೆ” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ..
http://ಶಿರ್ವ: ಅಕ್ರಮ ದನದ ಮಾಂಸ ಮಾರಾಟಕ್ಕೆ ಯತ್ನ ಒರ್ವನ ಬಂಧನ -Vishwanews24
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…