ಬೆಂಗಳೂರು : 2013ರಲ್ಲಿ ಬಿಜೆಪಿ ಸೋಲಿಗೆ ಸಿದ್ದರಾಮಯ್ಯ ಕಾರಣವಲ್ಲ ಬದಲಾಗಿ ಜೆಡಿಎಸ್ನ ಸತತ ಹೋರಾಟದಿಂದ ಬಿಜೆಪಿ ಸೋಲು ಅನುಭವಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನಿಂದ ಕಾಂಗ್ರೆಸ್ ಪಕ್ಷಕ್ಕೆ ಶಾಸಕರು ಸೇರಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಆದರೆ ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬ ಪಟ್ಟಿ ನನ್ನ ಬಳಿಯಿದೆ ಎಂದು ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ :
ನಮ್ಮ ಪಕ್ಷದ ಕೆಲವು ಶಾಸಕರು ಸಿದ್ದರಾಮಯ್ಯನವರ ಶ್ರಮದಿಂದ ಅವರು ಗೆದ್ದಿದ್ದಾರೆ ಎನ್ನುತಿದ್ದಾರೆ. ಆದರೆ ಅವರು ಗೆದ್ದಿರುವುದರಿಂದ ಸಿದ್ದರಾಮಯ್ಯನ ಸಂರ್ಪಕದಲ್ಲಿ ಇದ್ದಾರೆ ಎನ್ನುವುದು ಅವರಿಗೆ ಇನ್ನು ತಿಳಿದಿಲ್ಲ, ಅವರ ಗೆಲುವಿಗಾಗಿ ನಾನು ಎಷ್ಟು ಕಷ್ಟ ಬಂದಿದ್ದೇನೆಂದು ನನಗೆ ಗೋತ್ತು ಎಂದು ಪರೋಕ್ಷವಾಗಿ ಶಿವಲಿಂಗೇಗೌಡರ ವಿರುದ್ದ ವಾಗ್ದಾಳಿ ನಡೆಸಿದರು.
ಜೆಡಿಎಸ್ ಪಕ್ಷವನ್ನು ಬಿಟ್ಟು ನೀವು ಏನೂ ಮಾಡಲು ಆಗಲ್ಲ, ಅಧಿಕಾರದಲ್ಲಿ ಇದ್ದಾಗ ಒಂದು ನೀತಿ ಇಲ್ಲದಿರುವಾಗ ಇನ್ನೊಂದು ಅಲ್ಲ, ಸರ್ಕಾರಕ್ಕೆ ಪುಕ್ಸಟ್ಟೆ ಜಾಹೀರಾತು ನೀಡೋದೆ ಕೆಲಸ ಅಲ್ಲ, ರಾಜ್ಯ ನಡೆಸುವವರಿಗೆ ತಲೆ ಇರಬೇಕು ಇಲ್ಲಿ ಯಾರಿಗೂ ಯಾವ ಸಿದ್ದಾಂತದ ಅರಿವೇ ಇಲ್ಲ, ಇಲ್ಲಿ ಅಧಿಕಾರದ ಸಿದ್ದಾಂತವಷ್ಟೇ ಇದೆ. ಇನ್ನು 2023ರ ಚುನಾವಣೆಯಲ್ಲಿ ಜೆಡಿಎಸ್ನ ಸಾಧನೆ ಎಲ್ಲರಿಗೂ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…