ಬೆಂಗಳೂರು : 2013ರಲ್ಲಿ ಬಿಜೆಪಿ ಸೋಲಿಗೆ ಸಿದ್ದರಾಮಯ್ಯ ಕಾರಣವಲ್ಲ ಬದಲಾಗಿ ಜೆಡಿಎಸ್ನ ಸತತ ಹೋರಾಟದಿಂದ ಬಿಜೆಪಿ ಸೋಲು ಅನುಭವಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನಿಂದ ಕಾಂಗ್ರೆಸ್ ಪಕ್ಷಕ್ಕೆ ಶಾಸಕರು ಸೇರಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಆದರೆ ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬ ಪಟ್ಟಿ ನನ್ನ ಬಳಿಯಿದೆ ಎಂದು ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ :
ನಮ್ಮ ಪಕ್ಷದ ಕೆಲವು ಶಾಸಕರು ಸಿದ್ದರಾಮಯ್ಯನವರ ಶ್ರಮದಿಂದ ಅವರು ಗೆದ್ದಿದ್ದಾರೆ ಎನ್ನುತಿದ್ದಾರೆ. ಆದರೆ ಅವರು ಗೆದ್ದಿರುವುದರಿಂದ ಸಿದ್ದರಾಮಯ್ಯನ ಸಂರ್ಪಕದಲ್ಲಿ ಇದ್ದಾರೆ ಎನ್ನುವುದು ಅವರಿಗೆ ಇನ್ನು ತಿಳಿದಿಲ್ಲ, ಅವರ ಗೆಲುವಿಗಾಗಿ ನಾನು ಎಷ್ಟು ಕಷ್ಟ ಬಂದಿದ್ದೇನೆಂದು ನನಗೆ ಗೋತ್ತು ಎಂದು ಪರೋಕ್ಷವಾಗಿ ಶಿವಲಿಂಗೇಗೌಡರ ವಿರುದ್ದ ವಾಗ್ದಾಳಿ ನಡೆಸಿದರು.
ಜೆಡಿಎಸ್ ಪಕ್ಷವನ್ನು ಬಿಟ್ಟು ನೀವು ಏನೂ ಮಾಡಲು ಆಗಲ್ಲ, ಅಧಿಕಾರದಲ್ಲಿ ಇದ್ದಾಗ ಒಂದು ನೀತಿ ಇಲ್ಲದಿರುವಾಗ ಇನ್ನೊಂದು ಅಲ್ಲ, ಸರ್ಕಾರಕ್ಕೆ ಪುಕ್ಸಟ್ಟೆ ಜಾಹೀರಾತು ನೀಡೋದೆ ಕೆಲಸ ಅಲ್ಲ, ರಾಜ್ಯ ನಡೆಸುವವರಿಗೆ ತಲೆ ಇರಬೇಕು ಇಲ್ಲಿ ಯಾರಿಗೂ ಯಾವ ಸಿದ್ದಾಂತದ ಅರಿವೇ ಇಲ್ಲ, ಇಲ್ಲಿ ಅಧಿಕಾರದ ಸಿದ್ದಾಂತವಷ್ಟೇ ಇದೆ. ಇನ್ನು 2023ರ ಚುನಾವಣೆಯಲ್ಲಿ ಜೆಡಿಎಸ್ನ ಸಾಧನೆ ಎಲ್ಲರಿಗೂ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ :
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …