ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ವಜಾಗೊಳಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕಾಗಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಸುಬ್ರಮಣಿಯನ್ ಸ್ವಾಮಿ ಮಂಗಳವಾರ ಹೇಳಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಅಜಿತ್ ದೋವಲ್ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ವಾಮಿ, ‘ಅಜಿತ್ ದೋವಲ್ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಹಗರಣ ಸೇರಿದಂತೆ ಹಲವು ಬಾರಿ ಎಡವಟ್ಟು ಮಾಡಿದ್ದಾರೆ’ ಎಂದು ಹೇಳಿದ್ದಾರೆ.
‘ಅಜಿತ್ ದೋವಲ್ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಒಳಗೊಂಡಂತೆ ಹಲವಾರು ಬಾರಿ ಎಡವಟ್ಟು ಮಾಡಿದ್ದಾರೆ. ಮೋದಿ ಅವರು ಎನ್ಎಸ್ಎ ಹುದ್ದೆಯಿಂದ ದೋವಲ್ ಅವರನ್ನು ವಜಾಗೊಳಿಸಬೇಕು. ಇಲ್ಲದಿದ್ದರೆ 2023ರ ಮಧ್ಯದ ವೇಳೆಗೆ ಮೋದಿ ಕೂಡ ರಾಜೀನಾಮೆ ನೀಡಬೇಕಾಗಬಹುದು’ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಅಜಿತ್ ದೋವಲ್ ಮಾಡಿರುವ ಗಂಭೀರ ಯಡವಟ್ಟು ಶೀಘ್ರದಲ್ಲೇ ವಾಶಿಂಗ್ಟನ್ ಡಿಸಿಯಿಂದ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.
ಸ್ವಾಮಿ ಕಳೆದ ಕೆಲವು ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಲೋಪಗಳ ವಿರುದ್ಧ ಧ್ವನಿಯೆತ್ತುತ್ತಲೇ ಬಂದಿದ್ದಾರೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…