ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ವಜಾಗೊಳಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕಾಗಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಸುಬ್ರಮಣಿಯನ್ ಸ್ವಾಮಿ ಮಂಗಳವಾರ ಹೇಳಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಅಜಿತ್ ದೋವಲ್ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ವಾಮಿ, ‘ಅಜಿತ್ ದೋವಲ್ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಹಗರಣ ಸೇರಿದಂತೆ ಹಲವು ಬಾರಿ ಎಡವಟ್ಟು ಮಾಡಿದ್ದಾರೆ’ ಎಂದು ಹೇಳಿದ್ದಾರೆ.
‘ಅಜಿತ್ ದೋವಲ್ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಒಳಗೊಂಡಂತೆ ಹಲವಾರು ಬಾರಿ ಎಡವಟ್ಟು ಮಾಡಿದ್ದಾರೆ. ಮೋದಿ ಅವರು ಎನ್ಎಸ್ಎ ಹುದ್ದೆಯಿಂದ ದೋವಲ್ ಅವರನ್ನು ವಜಾಗೊಳಿಸಬೇಕು. ಇಲ್ಲದಿದ್ದರೆ 2023ರ ಮಧ್ಯದ ವೇಳೆಗೆ ಮೋದಿ ಕೂಡ ರಾಜೀನಾಮೆ ನೀಡಬೇಕಾಗಬಹುದು’ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಅಜಿತ್ ದೋವಲ್ ಮಾಡಿರುವ ಗಂಭೀರ ಯಡವಟ್ಟು ಶೀಘ್ರದಲ್ಲೇ ವಾಶಿಂಗ್ಟನ್ ಡಿಸಿಯಿಂದ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.
ಸ್ವಾಮಿ ಕಳೆದ ಕೆಲವು ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಲೋಪಗಳ ವಿರುದ್ಧ ಧ್ವನಿಯೆತ್ತುತ್ತಲೇ ಬಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…