ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವ ಪ್ರಶ್ನೆಯೇ ಇಲ್ಲ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಚಾಮುಂಡೇಶ್ವರಿ, ಇಲವಾಲ ಬ್ಲಾಕ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದು ನನ್ನ ಕೊನೆಯ ಚುನಾವಣೆ, 2023 ನನ್ನ ಕೊನೆಯ ಚುನಾವಣಾ ಯುದ್ಧವಾಗಿದೆ. ನಾನು ರಾಜ್ಯಸಭಾ ಸದಸ್ಯತ್ವ ಸೇರಿದಂತೆ ಯಾವುದೇ ಸ್ಥಾನಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. 2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ನ ಜಿಟಿ ದೇವೇಗೌಡ ವಿರುದ್ಧ ಸೋತಿದ್ದರು. ಆದರೆ ಅವರು ಬಾದಾಮಿಯಿಂದ ಬಿಜೆಪಿಯ ಶ್ರೀರಾಮುಲು ಅವರನ್ನು ಸೋಲಿಸಿ ಗೆದ್ದಿದ್ದಾರೆ. ಬಾದಾಮಿಯ ಜನ ತಮ್ಮ ಮೇಲೆ ನಂಬಿಕೆ ಇಟ್ಟು 2018 ರಲ್ಲಿ ವಿಧಾನಸೌಧಕ್ಕೆ ಕಳುಹಿಸಿದರು ಎಂದು ಹೇಳಿದರು.
ಪಕ್ಷದಲ್ಲಿ ಶಿಸ್ತು ಇರಬೇಕು. ಶಿಸ್ತು ಇಲ್ಲದ ಪಕ್ಷ ಬಲಯುವತವಾಗಿ ಬೆಳೆಯಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತು ಇಲ್ಲದೆ ಇದ್ದರೆ ಒಬ್ಬರ ಕಾಲನ್ನು ಮತ್ತೊಬ್ಬರು ಎಳೆಯುತ್ತಾರೆ. ನನ್ನ ಮೇಲಿನ ಅಭಿಮಾನಕ್ಕೆ ಚಾಮುಂಡೇಶ್ವರಿ ಸ್ಪರ್ಧೆಗೆ ಮರಿಗೌಡ ಆಹ್ವಾನ ನೀಡಿದರು. ಅದಕ್ಕೆ ಬಸವರಾಜು ಹಾಗೂ ಇತರರು ವಿರೋಧ ವ್ಯಕ್ತಪಡಿಸಿದರು. ಇಬ್ಬರ ಅಭಿಪ್ರಾಯ ಕೂಡ ಸರಿ ಇದೆ. ಇಬ್ಬರೂ ನನ್ನ ಮೇಲಿನ ಅಭಿಮಾನಕ್ಕೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…