ಹಾಸನ: ಬಿಜೆಪಿ ಜತೆ ಜೆಡಿಎಸ್ ವಿಲೀನ ಮಾತು ಸುಳ್ಳು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೇವಣ್ಣ, ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಮುಗಿಸುವುದು ಒಂದೇ ಗುರಿಯಾಗಿದೆ. ಇದೇ ಕಾರಣಕ್ಕೆ ಜೆಡಿಎಸ್ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಈ ರೀತಿ ಸುಳ್ಳು ಸುದ್ದಿ ಹರಡುವುದು ತಪ್ಪು. ಗ್ರಾ.ಪಂ.ಚುನಾವಣೆ ಸಂದರ್ಭದಲ್ಲಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ.
ಅರವಿಂದ ಲಿಂಬಾವಳಿ ಒಬ್ಬ ಥರ್ಡ್ ಕ್ಲಾಸ್ ಇಂಥವರಿಂದಲೇ ಅವರ ಪಕ್ಷ ಸರ್ವನಾಶವಾಗಲಿದೆ. ಪಕ್ಷದ ಇತರೆ ನಾಯಕರು ಅವರಿಗೆ ಬುದ್ಧಿವಾದ ಹೇಳಲಿ ಎಂದು ಎಂದು ಎಚ್ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಅರವಿಂದ ಲಿಂಬಾವಳಿ ಕೂಡಲೇ ಕ್ಷಮೆಯಾಚನೆ ಮಾಡುವಂತೆ ರೇವಣ್ಣ ಒತ್ತಾಯಿಸಿದರು. ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಹೊಂದಾಣಿಕೆ ಪ್ರಶ್ನೆ ಇಲ್ಲ. ಹಾಗಾದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುವೆ.
ಈ ಸಂಬಂಧ ಈಗಾಗಲೇ ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. 2023ರಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸುತ್ತೇವೆ. ನಮ್ಮ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸುತ್ತೇವೆ ಎಂದು ಇದೆ ವೇಳೆ ತಿಳಿಸಿದರು. ನಾನು ಜಿಲ್ಲೆ ಬಿಟ್ಟು ಹೋಗಿರಲಿಲ್ಲ, ಇನ್ನು ಮುಂದೆ ಎಲ್ಲೆಡೆ ಹೋಗುವೆ. ಸಂಕ್ರಾಂತಿ ನಂತರ ಎಲ್ಲರ ಜೊತೆ ಈ ಕುರಿತು ಮಾತನಾಡುತ್ತೇವೆ. ಬಿಜೆಪಿ ಸರ್ಕಾರ ಬಂದರ ನಂತರ ಎಲ್ಲಾ ಅಭಿವೃದ್ಧಿ ಕಾಮಗಾರಿ ನಿಲ್ಲಿಸಿದ್ದಾರೆ. ಕಾಮಗಾರಿ ಎಲ್ ಒ ಸಿ ಪಡೆಯಲು ಕಮಿಷನ್ ಕೊಡಬೇಕು.
ಸರಕಾರದಲ್ಲಿ ಲೂಟಿ ನಡೆಯುತ್ತಿದೆ. ಜಿಲ್ಲೆಯ ಎಲ್ಲಾ ಕೆಲಸಗಳನ್ನು ತಡೆ ಹಿಡಿಯಲಾಗುತ್ತಿದೆ. ಹೀಗೆ ಮಾಡುವುದರಿಂದ ನಾವು ಹೆದರಿಕೊಂಡು ಹೋಗಲ್ಲ ಎಂದು ರೇವಣ್ಣ ಗುಡುಗಿದರು. ದ್ವೇಷ ರಾಜಕಾರಣ ಅವರಿಗೇ ರಿವರ್ಸ್ ಆಗಲಿದೆ. ನಾನು ಹಾಸನದಲ್ಲಿ ಬಿಜೆಪಿ ಶಾಸಕರಿದ್ದಾರೆ ಅಂತ ಹಣ ಕೊಡದೇ ಇರಲಿಲ್ಲ.ಕಷ್ಟ ಕಾಲದಲ್ಲಿ ಈ ಪಕ್ಷದಲ್ಲಿ ಅನೇಕರು ಆಶ್ರಯ ಪಡೆದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…