ಕಲಬುರಗಿ : ಮುಂಬರುವ 2024 ರ ಸಂಸತ್ ಚುನಾವಣೆಯಲ್ಲಿ ಈ ದೇಶದಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಸಂವಿಧಾನಕ್ಕೆ ವಿಪತ್ತು ಕಾದಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಆತಂಕ ಹೊರಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿರುವ ಬಿಜೆಪಿ ಕೇಂದ್ರದಲ್ಲಿ ಮನ ಬಂದಂತೆ ಅಧಿಕಾರ ಮಾಡುತ್ತಿದೆ. ಇದೇ ಪಕ್ಷ ಮತ್ತೆ ಪುನಃ ಹೆಚ್ಚಿನ ಸ್ಥಾನಗಳೊಂದಿಗೆ, 2024ರಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇಯಾದರೆ ಸಂವಿಧಾನಕ್ಕೆ ಆಪತ್ತು ನಿಶ್ಚಿತ ಎಂದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಎಲ್ಲ ಪ್ರಯತ್ನ ಬಿಜೆಪಿ ಹೊಂದಿದೆ. ಹೀಗಾಗಿ ಸಂವಿಧಾನ ಬದಲಾಯಿಸುವುದನ್ನು ತಪ್ಪಿಸಲು ಜನರು ಈಗಲಾದರೂ ಎಚ್ಚೆತ್ತುಕೊಳ್ಳುವುದು ಅಗತ್ಯವಾಗಿದೆ ಎಂದು ಖರ್ಗೆ ಹೇಳಿದರು.
ಬಲವಂತದ ಮತಾಂತರ ತಡೆಯಲು ಈಗಾಗಲೇ ಭಾರತೀಯ ದಂಡ ಸಂಹಿತೆಯಡಿ ಕ್ರಮ ಕೈಗೊಳ್ಳಲು ಅವಕಾಶವಿದೆ. ಇಷ್ಟಿದ್ದರೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಜಾರಿಗೆ ತರುತ್ತಿರುವುದನ್ನು ನೋಡಿದರೆ ಬಿಜೆಪಿ ತನ್ನ ಅಜೆಂಡಾ ಹೇಗಾದರೂ ಮಾಡಿ ಕಾರ್ಯರೂಪಕ್ಕೆ ತಂದೇ ತರುತ್ತೇವೆ ಎಂಬುದಕ್ಕೆ ಸಾಕ್ಷೀಕರಿಸುವಂತಿದೆ ಎಂದು ಟೀಕಿಸಿದರು.
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…