Featured

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ

ಬೆಂಗಳೂರು: ‘2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, 2028ಕ್ಕೆ ನಮ್ಮ ಸರ್ಕಾರ ಬರುವ ಕನಸು ಕಾಣಬೇಡಿ ಕೆಲಸ ಮಾಡಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬಿನ್ ಅವರು ರಾಜ್ಯ ನಾಯಕರಿಗೆ ಸೂಚನೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಮಿತ್ ಶಾ ಅವರು ಬಿಜೆಪಿಗೆ 122 ಸೀಟು ಬರುತ್ತದೆ, ಎಲ್ಲರೂ ಸೂಟುಬೂಟು ಸಿದ್ಧಮಾಡಿಕೊಳ್ಳಿ ಎಂದಿದ್ದರು. ನಾನು ನಮಗೆ 136 ಸೀಟು ಬರಲಿದೆ ಎಂದು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಬಲವಾಗಿ ಭವಿಷ್ಯ ನುಡಿದರು.

ಇದನ್ನೂ ಓದಿ:

ನೀವು ದೆಹಲಿ ಪ್ರವಾಸ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ನಮ್ಮನ್ನು ಕರೆದರೆ ಹೋಗುತ್ತೇವೆ. ಸುರ್ಜೆವಾಲ ಅವರು ನಿಮಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಅವರು ದೆಹಲಿಗೆ ಬನ್ನಿ ಎಂದರೆ ನಾನು ಹೋಗುತ್ತೇನೆ. ಇಲ್ಲವಾದರೆ ಇಲ್ಲೇ ಉಳಿಯುತ್ತೇನೆ. ಪಕ್ಷ ಕರೆದಾಗ ನಾವು ಹೋಗಲೇಬೇಕಾಗುತ್ತದೆ’ ಎಂದು ಉತ್ತರಿಸಿದರು.

ಫಲಾನುಭವಿಗಳಿಗೆ ಗ್ಯಾರಂಟಿ ತಲುಪುವಂತೆ ಪರಿಶೀಲನೆ: ಗ್ಯಾರಂಟಿ ಪರಿಷ್ಕರಣೆ ಮಾಡಲಾಗುವುದೇ ಎಂದು ಕೇಳಿದಾಗ, ‘ಕೆಲವು ಗ್ಯಾರಂಟಿ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರಿಗೆ ಹೋಗಿ ದುರ್ಬಳಕೆಯಾಗಿದೆ. ಇನ್ನು ಬೇರೆಯವರ ದೂರವಾಣಿ ಸಂಖ್ಯೆ ಕೊಟ್ಟಿರುವುದರಿಂದ ಸರಿಯಾದ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದಯೇ, ಇಲ್ಲವೇ ಎಂದು ತಿಳಿಯಬೇಕಿದೆ. ಹೀಗಾಗಿ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಬಗ್ಗೆ ಚರ್ಚೆ ಮಾಡುವ ಬಗ್ಗೆ ಸಲಹೆ ಬಂದಿದೆ. ಪ್ರತಿ ತಾಲೂಕಿನಲ್ಲಿ ಇದನ್ನು ಪರಿಶೀಲನೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ:

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago