Featured

2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ :  ಕುಣಿಗಲ್ ರಂಗನಾಥ್ – vishwanews24

2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ :  ಕುಣಿಗಲ್ ರಂಗನಾಥ್

ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 2,000 ರೂ. ಇರುವ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ ಎಂದು ಶಾಸಕ ಕುಣಿಗಲ್ ರಂಗನಾಥ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಮಾಡಿದ ದಿನವೇ ನಾನು ಹೇಗಾದರೂ ಬಡವರಿಗೆ ಸಹಾಯ ಮಾಡಬೇಕು ಎಂದು ಹೇಳಿದ್ದರು. ಗೃಹಲಕ್ಷ್ಮಿಯು ವಿಶೇಷವಾದ ಹಣಕಾಸು ಯೋಜನೆಯಾಗಿದೆ. ಇವತ್ತು ಬಹಳಷ್ಟು ಜನರು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ. 2,000 ರೂ ಏನಾಗುತ್ತೆ? 2,000ದಲ್ಲಿ ಏನು ಬದಲಾಗುತ್ತದೆ. ಈ ಬದಲಾವಣೆಯನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಹೇಳಿದರು.

ಹಳ್ಳಿಯಲ್ಲಿ ಇರುವವರಿಗೆ ಇನ್ನೂ 5,000 ಮನೆಗಳನ್ನು ಕೊಡಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಕೆಲವು ಕುಟುಂಬಗಳು ಗುಡಿಸಲಲ್ಲಿ ವಾಸಮಾಡುತ್ತಿದ್ದಾರೆ. 24,000 ಸಾವಿರ ರೂ. ಪ್ರತಿ ವರ್ಷ ಕೊಟ್ಟರೇ ಆ ಬದುಕಿನ ಬದಲಾವಣೆಯ ಬೆಳಕನ್ನು ನೋಡಬೇಕು ಅಂದರೆ ಬೆಂಗಳೂರಲ್ಲಿ ಇರೋರು ಬಂದು ನೋಡಬೇಕು ಎಂದರು.

ದಯವಿಟ್ಟು ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಬಗ್ಗೆ ಯಾರಾದರು ವಿರೋಧ ಮಾಡಿದರೆ ಆ ಶಾಪ ತಟ್ಟುತ್ತದೆ. ಇವತ್ತು ನಾನು ಚಾಲೆಂಜ್ ಹಾಕುತ್ತಿದ್ದೇನೆ. ಮುಂದಿನ ಸರ್ಕಾರ ಯಾವುದೇ ಬದಲಾವಣೆ ಆದರೂ ಯಾರೂ ಗ್ಯಾರೆಂಟಿ ಯೋಜನೆ ನಿಲ್ಲಸಲು ಆಗುವುದಿಲ್ಲ. ಮುಂದಿನ ಸಾಲಿನ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಪುನಃ ಅಧಿಕಾರಕ್ಕೆ ಬಂದರೆ 2,000 ರೂ. ಅನ್ನು 4,000 ರೂ.ಗೆ ಏರಿಕೆ ಮಾಡಲು ನಾವು ಸಿದ್ಧರಾಗುತ್ತೇವೆ ಎಂದು ನುಡಿದರು

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago