ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2047ರ ವರೆಗೂ ಅಧಿಕಾರದಲ್ಲಿ ಇರಲಿದ್ದು, ಕಾಂಗ್ರೆಸ್ ಸರ್ಕಾರದ ದೀರ್ಘಾವಧಿ ಆಡಳಿತದ ದಾಖಲೆ ಮುರಿಯಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಗರ್ತಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
ಅಗರ್ತಲಾದಲ್ಲಿ ಶುಕ್ರವಾರ ನಡೆದ ಬಿಜೆಪಿ ವಿಜಯಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎಂಬುದು ಬಿಜೆಪಿಯ ಡಿಎನ್ಎ ಅಲ್ಲಿಯೇ ಇದೆ. ಅದೇ ಬಿಜೆಪಿ ಪಕ್ಷದ ಹೆಗ್ಗುರುತು. ಹಾಗಾಗಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಜನ ಭರವಸೆ ಇರಿಸಿದ್ದಾರೆ. ಇದೇ ಕಾರಣಕ್ಕೆ ಸತತ 2ನೇ ಬಾರಿಗೂ ಭರ್ಜರಿ ಗೆಲುವು ನೀಡಿದ್ದಾರೆ. ಮೋದಿ ಸರ್ಕಾರ ದೇಶದಲ್ಲಿನ ಕೋಮು ಸಂಘರ್ಷ, ಭ್ರಷ್ಟಾಚಾರ ನಿಯಂತ್ರಿಸಿದ್ದು, ಬಲಿಷ್ಠ ಭಾರತದ ನಿರ್ಮಾಣ ಮಾಡುತ್ತಿದೆ. ವಿತ್ತೀಯ ಸ್ಥಿರತೆ ಸಾಧಿಸಿದೆ ಎಂದು ಮಾಧವ್ ಹೇಳಿದ್ದಾರೆ.
ಮೋದಿ ಸರ್ಕಾರದ ಯಶಸ್ಸು ಸುದೀರ್ಘ ಅವಧಿಯವರೆಗೂ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಮೋದಿ ಅವರ ನಾಯಕತ್ವ ಮುಂದುವರೆಯಲಿದ್ದು, ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ. ರಾಷ್ಟ್ರೀಯತೆ ಬಿಜೆಪಿ ಡಿಎನ್ಎಯಲ್ಲೇ ಇದ್ದು, ಬಿಜೆಪಿ ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಖಂಡಿತಾ ಮುರಿಯಲಿದೆ. 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡುತ್ತಾ, ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಬಿಜೆಪಿ ಖಂಡಿತಾ ಮುರಿಯಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ರಾಮ್ ಮಾಧವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…