Featured

2047ರಲ್ಲಿ ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ : ರಾಮ್ ಮಾಧವ್ -Vishwanews24

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2047ರ ವರೆಗೂ ಅಧಿಕಾರದಲ್ಲಿ ಇರಲಿದ್ದು, ಕಾಂಗ್ರೆಸ್ ಸರ್ಕಾರದ ದೀರ್ಘಾವಧಿ ಆಡಳಿತದ ದಾಖಲೆ ಮುರಿಯಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಗರ್ತಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.

ಅಗರ್ತಲಾದಲ್ಲಿ ಶುಕ್ರವಾರ ನಡೆದ ಬಿಜೆಪಿ ವಿಜಯಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎಂಬುದು ಬಿಜೆಪಿಯ ಡಿಎನ್ಎ ಅಲ್ಲಿಯೇ ಇದೆ. ಅದೇ ಬಿಜೆಪಿ ಪಕ್ಷದ ಹೆಗ್ಗುರುತು. ಹಾಗಾಗಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಜನ ಭರವಸೆ ಇರಿಸಿದ್ದಾರೆ. ಇದೇ ಕಾರಣಕ್ಕೆ ಸತತ 2ನೇ ಬಾರಿಗೂ ಭರ್ಜರಿ ಗೆಲುವು ನೀಡಿದ್ದಾರೆ. ಮೋದಿ ಸರ್ಕಾರ ದೇಶದಲ್ಲಿನ ಕೋಮು ಸಂಘರ್ಷ, ಭ್ರಷ್ಟಾಚಾರ ನಿಯಂತ್ರಿಸಿದ್ದು, ಬಲಿಷ್ಠ ಭಾರತದ ನಿರ್ಮಾಣ ಮಾಡುತ್ತಿದೆ. ವಿತ್ತೀಯ ಸ್ಥಿರತೆ ಸಾಧಿಸಿದೆ ಎಂದು ಮಾಧವ್ ಹೇಳಿದ್ದಾರೆ.

ಮೋದಿ ಸರ್ಕಾರದ ಯಶಸ್ಸು ಸುದೀರ್ಘ ಅವಧಿಯವರೆಗೂ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಮೋದಿ ಅವರ ನಾಯಕತ್ವ ಮುಂದುವರೆಯಲಿದ್ದು, ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ. ರಾಷ್ಟ್ರೀಯತೆ ಬಿಜೆಪಿ ಡಿಎನ್ಎಯಲ್ಲೇ ಇದ್ದು, ಬಿಜೆಪಿ ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಖಂಡಿತಾ ಮುರಿಯಲಿದೆ. 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡುತ್ತಾ, ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಬಿಜೆಪಿ ಖಂಡಿತಾ ಮುರಿಯಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ರಾಮ್ ಮಾಧವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

15 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

15 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

15 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

15 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

16 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

16 hours ago