ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2047ರ ವರೆಗೂ ಅಧಿಕಾರದಲ್ಲಿ ಇರಲಿದ್ದು, ಕಾಂಗ್ರೆಸ್ ಸರ್ಕಾರದ ದೀರ್ಘಾವಧಿ ಆಡಳಿತದ ದಾಖಲೆ ಮುರಿಯಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಗರ್ತಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
ಅಗರ್ತಲಾದಲ್ಲಿ ಶುಕ್ರವಾರ ನಡೆದ ಬಿಜೆಪಿ ವಿಜಯಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎಂಬುದು ಬಿಜೆಪಿಯ ಡಿಎನ್ಎ ಅಲ್ಲಿಯೇ ಇದೆ. ಅದೇ ಬಿಜೆಪಿ ಪಕ್ಷದ ಹೆಗ್ಗುರುತು. ಹಾಗಾಗಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಜನ ಭರವಸೆ ಇರಿಸಿದ್ದಾರೆ. ಇದೇ ಕಾರಣಕ್ಕೆ ಸತತ 2ನೇ ಬಾರಿಗೂ ಭರ್ಜರಿ ಗೆಲುವು ನೀಡಿದ್ದಾರೆ. ಮೋದಿ ಸರ್ಕಾರ ದೇಶದಲ್ಲಿನ ಕೋಮು ಸಂಘರ್ಷ, ಭ್ರಷ್ಟಾಚಾರ ನಿಯಂತ್ರಿಸಿದ್ದು, ಬಲಿಷ್ಠ ಭಾರತದ ನಿರ್ಮಾಣ ಮಾಡುತ್ತಿದೆ. ವಿತ್ತೀಯ ಸ್ಥಿರತೆ ಸಾಧಿಸಿದೆ ಎಂದು ಮಾಧವ್ ಹೇಳಿದ್ದಾರೆ.
ಮೋದಿ ಸರ್ಕಾರದ ಯಶಸ್ಸು ಸುದೀರ್ಘ ಅವಧಿಯವರೆಗೂ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಮೋದಿ ಅವರ ನಾಯಕತ್ವ ಮುಂದುವರೆಯಲಿದ್ದು, ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ. ರಾಷ್ಟ್ರೀಯತೆ ಬಿಜೆಪಿ ಡಿಎನ್ಎಯಲ್ಲೇ ಇದ್ದು, ಬಿಜೆಪಿ ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಖಂಡಿತಾ ಮುರಿಯಲಿದೆ. 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡುತ್ತಾ, ಕಾಂಗ್ರೆಸ್ ನ 27 ವರ್ಷಗಳ ಕಾಲ ಸುದೀರ್ಘ ಸರ್ಕಾರದ ದಾಖಲೆಯನ್ನು ಬಿಜೆಪಿ ಖಂಡಿತಾ ಮುರಿಯಲಿದೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ. ಆ ಮೂಲಕ ಅತೀ ಹೆಚ್ಚು ಸಮಯ ದೇಶದಲ್ಲಿ ಸರ್ಕಾರ ನಡೆಸಿದ ಮೊದಲ ಪಕ್ಷ ಎಂಬ ದಾಖಲೆ ಬರೆಯಲಿದೆ ಎಂದು ರಾಮ್ ಮಾಧವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…