ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದರು.
ದೆಹಲಿಯ ಕೆಂಪುಕೋಟೆಯ ಆವರಣದಿಂದ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಳೆದ 12 ವರ್ಷಗಳಲ್ಲಿ ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವೇ ಸಂಪೂರ್ಣವಾಗಿ ಬದಲಾಗಿದೆ. ಹಾಗಾಗಿ ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಅಭಿಯಾನವನ್ನು ಬಲಪಡಿಸುವುದು ಹಾಗೂ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸುವುದು ಅತ್ಯಂತ ಮುಖ್ಯ.
2047ರೊಳಗೆ ‘ವಿಕಸಿತ ಭಾರತ’ದ ಗುರಿ
ಭಾರತದ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ದೇಶವನ್ನ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಸಾಧಿಸಲೇಬೇಕು. ಈ ಗುರಿಯನ್ನು ನಾವು ಸಾಧಿಸಲೇಬೇಕು. 140 ಕೋಟಿ ಭಾರತೀಯರೂ ಇದಕ್ಕಾಗಿ ಶ್ರಮಿಸಬೇಕು. ವಿಶ್ವದ ಅತಿದೊಡ್ಡ ಜನಸಂಖ್ಯೆಯ ರಾಷ್ಟ್ರವೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಕೈಗೊಂಡಾಗ, ಅದು ನಮ್ಮ ಧೈರ್ಯಕ್ಕೆ ಸಾಕ್ಷಿಯಾಗುತ್ತದೆ. ಆಗ ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನವೂ ಬದಲಾಗುತ್ತದೆ ಎಂದು ಅವರು ಹೇಳಿದರು.
ಕಳೆದ 12 ವರ್ಷಗಳಲ್ಲಿ ದಲಿತರು, ಶೋಷಿತರು, ಬಡವರು, ಮಧ್ಯಮ ವರ್ಗದವರು, ಯುವಕರು ಸೇರಿದಂತೆ ಕೋಟ್ಯಂತರ ಭಾರತೀಯರು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಶ್ರಮಿಸಿದ್ದಾರೆ. ಈ ಪ್ರಯತ್ನಗಳ ಫಲವಾಗಿ 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…