Featured

21 ವರ್ಷದ ಅರ್ಚಕನ ಜೊತೆ ವಿವಾಹಿತ ಮಹಿಳೆ ಪರಾರಿ ; ಹತ್ತು ದಿನ ತಿರುಗಾಡಿ ಮಧ್ಯರಾತ್ರಿ ಕಾಡಿನಲ್ಲೇ ಬಿಟ್ಟು ಓಡಿ ಹೋದ ಪ್ರಿಯತಮ – Vishwanews24

21 ವರ್ಷದ ಅರ್ಚಕನ ಜೊತೆ ವಿವಾಹಿತ ಮಹಿಳೆ ಪರಾರಿ ; ಹತ್ತು ದಿನ ತಿರುಗಾಡಿ ಮಧ್ಯರಾತ್ರಿ ಕಾಡಿನಲ್ಲೇ ಬಿಟ್ಟು ಓಡಿ ಹೋದ ಅರ್ಚಕ – Vishwanews24

ಮೈಸೂರು: ಹತ್ತು ದಿನಗಳ ಹಿಂದೆ 21 ವರ್ಷದ ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಅರ್ಚಕನ ಜೊತೆ ಪರಾರಿಯಾದ ಎರಡು ಮಕ್ಕಳ ತಾಯಿ ಈಗ ಅತಂತ್ರಕ್ಕೆ ಸಿಲುಕಿದ್ದಾಳೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಚಿಗುರು ಮೀಸೆಯ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನ ಒಡನಾಟ ಬೆಳೆಸಿ ನಂತರ ಕಾಡಂಚಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂಬ ಆರೋಪಿಸಲಾಗಿದೆ.

ಗ್ರಾಮಸ್ಥರ ಕಣ್ಣಿಗೆ ಬಿದ್ದ ಗೃಹಿಣಿ ಅರ್ಚಕನ ಜೊತೆ ಇರಬೇಕೆಂದು ಪಟ್ಟು ಹಿಡಿದಿದ್ದಾಳೆ. ಆದರೆ ಪೂಜಾರಿ ಕೈ ಕೊಟ್ಟು ಪರಾರಿಯಾಗಿದ್ದಾನೆ. 35 ವರ್ಷದ ಗೃಹಿಣಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಈಗ ನಿರ್ಜನ ಪ್ರದೇಶದಲ್ಲಿ ಗೃಹಿಣಿ ಕಾಣಿಸಿಕೊಂಡಿದ್ದಾಳೆ. ಕೌಟುಂಬಿಕ ಸಮಸ್ಯೆಗೆ ಪರಿಹಾರ ಕೇಳಲು ಮಹದೇಶ್ವರನ ದೇವಸ್ಥಾನಕ್ಕೆ ಬಂದಾಗ 21 ವರ್ಷದ ಅರ್ಚಕ ಸಂತೋಷ್ ಈಕೆಯ ಜೊತೆ ಸಲುಗೆ ಬೆಳೆಸಿದ್ದಾನೆ. ನಿನಗೆ ಹೊಸ ಬಾಳು ಕೊಡುತ್ತೇನೆಂದು ನಂಬಿಸಿದ ಸಂತೋಷ್ ಗೃಹಿಣಿಯನ್ನ ಕರೆದೊಯ್ದಿದ್ದಾನೆ. ಹತ್ತು ದಿನಗಳ ಕಾಲ ಆಕೆಯೊಂದಿಗೆ ತಿರುಗಾಡಿ, ನಂತರ ಆತ್ಮಹತ್ಯೆ ನಾಟಕವಾಡಿ ಕಾಡಿಗೆ ಕರೆತಂದಿದ್ದಾನೆ. ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಸಂತೋಷ್ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

ಇಡೀ ರಾತ್ರಿ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದ ಗೃಹಿಣಿ ಮುಂಜಾನೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾಳೆ. ಗೃಹಿಣಿಯ ಕಥೆ ಕೇಳಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗೃಹಿಣಿಗೆ ರಕ್ಷಣೆ ನೀಡಿದ್ದಾರೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಪೂಜಾರಿ ಸಂತೋಷ್ ಇದೀಗ ನಾಪತ್ತೆಯಾಗಿದ್ದು, ಗಂಡನ ಮನೆಯೂ ಇಲ್ಲ, ಬಾಳು ಕೊಡುವುದಾಗಿ ನಂಬಿಸಿದ ಸಂತೋಷ್ ಸಹ ಇಲ್ಲದೆ, ಗೃಹಿಣಿ ಅತಂತ್ರಕ್ಕೆ ಸಿಲುಕಿದ್ದಾಳೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

5 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

14 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

15 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

15 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago