Featured

22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವವರೆಗೆ ನಾನು ಮನೆಗೆ ಹೋಗುವುದಿಲ್ಲ : ಬಿಎಸ್​ವೈ – Vishwanews24

ಹಾವೇರಿ:ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಕರ್ನಾಟಕದ 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು ವಿಜಯ ಕಹಳೆಯನ್ನು ಮೊಳಗಿಸಲು ಹೊರಟಿದೆ. ಹೀಗಾಗಿ ಈ ಕ್ಷೇತ್ರಗಳನ್ನು ಗೆಲ್ಲುವವರೆಗೆ ನಾನು ಮನೆಗೆ ಹೋಗುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ನರೇಂದ್ರ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಗೆ ಸರಿಸಾಟಿಯಾದ ವ್ಯಕ್ತಿ ದೇಶದಲ್ಲಿ ಮತ್ತೊಬ್ಬರಿಲ್ಲ. ಸೂರ್ಯ-ಚಂದ್ರರು ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ಅಷ್ಟೇ ಸತ್ಯ ಎಂದು ಬಿಎಸ್​ವೈ ಭವಿಷ್ಯ ನುಡಿದರು.

ಹಣ ಬಲ, ತೋಳ್ಬಲ ಹಾಗೂ ಹೆಂಡದ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಲವರು ಭ್ರಮೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಜನರ ಪಾಲಿಗೆ ಬದುಕಿದೆಯಾ ಎಂಬ ಸಂಶಯ ಮೂಡತೊಡಗಿದೆ. ಬಂಡೀಪುರದಲ್ಲಿ ಮೂರು ದಿನಗಳಿಂದ ಕಾಡ್ಗಿಚ್ಚು ಸಂಭವಿಸಿ ಅರಣ್ಯವೆಲ್ಲ ನಾಶವಾಗುತ್ತಿದೆ. ಮಾಹಿತಿ ತಿಳಿದ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸಬಹುದಿತ್ತು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಏರ್ ಶೋದಲ್ಲಿ ಬೆಂಕಿ ಬಿದ್ದಾಗಲೂ ಇವರ ಕೈಯಲ್ಲಿ ಬೆಂಕಿ ನಂದಿಸಲು ಆಗಲಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

Vishwa News 24

Recent Posts

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

11 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

23 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago