Featured

23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ : ಸಚಿವ ಎಚ್.ಕೆ.ಪಾಟೀಲ್ – vishwanews24

23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ನೆರವು : ಸಚಿವ ಎಚ್.ಕೆ.ಪಾಟೀಲ್

ಬೆಳಗಾವಿ (ಸುವರ್ಣ ವಿಧಾನಸೌಧ): ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ 23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಘೋಷಣೆ ಮಾಡಿದ್ದಾರೆ.

ಮಂಗಳವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, 2025-26ನೆ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ 5 ಲಕ್ಷದಂತೆ ಒಟ್ಟು 50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಕರಾವಳಿ ಭಾಗದ ಸದಸ್ಯರಾದ ಸುನೀಲ್ ಕುಮಾರ್, ವೇದವಾಸ್ ಕಮಾತ್, ಅಶೋಕ್ ಕುಮಾರ್ ರೈ ಸೇರಿದಂತೆ ಪ್ರಮುಖರು, ಕರಾವಳಿ ಭಾಗದಲ್ಲಿ ಕಂಬಳೋತ್ಸವ ಮುಖ್ಯವಾದ ಕ್ರೀಡೆ ಮಾತ್ರವಲ್ಲದೆ, ಪ್ರವಾಸೋದ್ಯಮ ಚಟುವಟಿಕೆಗಳನ್ನು ಉತ್ತೇಜನ ನೀಡಲಿದೆ. ಹೀಗಾಗಿ, ರಾಜ್ಯ ಸರಕಾರ ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ಕಂಬಳೋತ್ಸವಗಳಿಗೆ ಪ್ರತಿ ವರ್ಷ ಬಜೆಟ್‍ನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಶಾಸಕರುಗಳ ಅಭಿಪ್ರಾಯದಂತೆ 23 ಕಂಬಳೋತ್ಸವಗಳಿಗೆ ಅನುದಾನ ಬಿಡುಗಡೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಆಗ ಸಚಿವರ ನಿರ್ಧಾರವನ್ನು ಸಭಾಧ್ಯಕ್ಷ ಯು.ಟಿ.ಖಾದರ್, ಸೇರಿ ಹಲವು ಶಾಸಕರುಗಳು ಒಕ್ಕೊರಲಿನಿಂದ ಅಭಿನಂದಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago