ಚೆನ್ನೈ: ತಮಿಳುನಾಡಿನಾದ್ಯಂತ ದೇವಾಲಯಗಳ ಹುಂಡಿ ಹಣದ ಮೇಲೆ ಪರಿಣಾಮ ಬೀರುವ ಪ್ರಮುಖ ನಿರ್ಧಾರವೊಂದರಲ್ಲಿ, ರಾಜ್ಯ ಸರ್ಕಾರವು ದೇವಾಲಯದ ನಿಧಿಯನ್ನು ಬಳಸಿಕೊಂಡು ನಿರ್ಮಾಣ ಮಾಡಲು ಉದ್ದೇಶಿಸಿದ್ದ ಸುಮಾರು 246 ಕೋಟಿ ರೂ.ಗಳ 46 ಯೋಜನೆಗಳನ್ನು ರದ್ದುಗೊಳಿಸಿದೆ. ಹಿಂದೂ ಧಾರ್ಮಿಕ ಮತ್ತು ದತ್ತಿ ದತ್ತಿ ಇಲಾಖೆಯ ಅಡಿಯಲ್ಲಿ ಮದುವೆ ಮಂಟಪಗಳು ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ಮಾಣವೂ ಸೇರಿತ್ತು ಎಂದು ವರದಿ ತಿಳಿಸಿದೆ.
ಜೂನ್ 19ರ ಸರ್ಕಾರಿ ಆದೇಶದ ಪ್ರಕಾರ, 115.77 ಕೋಟಿ ರೂಪಾಯಿ ವೆಚ್ಚದ 29 ಮದುವೆ ಮಂಟಪಗಳು ಹಾಗೂ 130.08 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣದ ಆದೇಶವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.
ಹಿಂದಿನ ಡಿಎಂಕೆ ನೇತೃತ್ವದ ಸರ್ಕಾರ ಈ ಯೋಜನೆಗೆ ಅನುಮತಿ ನೀಡಿತ್ತು. ಆದರೆ ನಿರ್ಮಾಣ ಕಾರ್ಯ ಆರಂಭಗೊಂಡಿರಲಿಲ್ಲವಾಗಿತ್ತು. ಒಟ್ಟು 245.85 ಕೋಟಿ ರೂಪಾಯಿ ವೆಚ್ಚದ ನಿರ್ಮಾಣ ಕಾರ್ಯಕ್ಕಾಗಿ ದೇವಾಲಯದ ನಿಧಿಯನ್ನು ಬಳಸಲು ಉದ್ದೇಶಿಸಿತ್ತು.
ಹಲವಾರು ಯೋಜನೆಗಳು ಕಾನೂನು ಸಮಸ್ಯೆಗಳನ್ನು ಎದುರಿಸುತ್ತಿವೆ. ಅಲ್ಲದೇ ದೇವಾಲಯಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ವಿಜಯ್ ನೇತೃತ್ವದ ಸರ್ಕಾರ ಹೇಳಿದೆ. ಬದಲಾಗಿ, ಈ ಹಣವನ್ನು ಈಗ ದೇವಾಲಯಗಳು ಮತ್ತು ಭಕ್ತರಿಗೆ ನೇರವಾಗಿ ಸಂಬಂಧಿಸಿದ ಕೆಲಸಗಳಿಗೆ ಬಳಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ದೇವಾಲಯದ ಮೂಲಸೌಕರ್ಯ ಸುಧಾರಣೆ, ನವೀಕರಣ ಮತ್ತು ಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಲು ಈ ಹಣವನ್ನು ಖರ್ಚು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದ ಆದಾಯವನ್ನು ಪ್ರಾಥಮಿಕವಾಗಿ ದೇವಾಲಯಗಳ ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ತಮಿಳುನಾಡು ಸರ್ಕಾರದ ಈ ನಿರ್ಧಾರ ಇದೀಗ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ದೇವಾಲಯದ ನಿಧಿ ಬಳಸಿ ಮದುವೆ ಮಂಟಪಗಳು ಹಾಗೂ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವ ಮೂಲಕ ದೇವಾಲಯ ಮತ್ತು ಭಕ್ತರಿಗೆ ಹೆಚ್ಚುವರಿ ಆದಾಯ ಪಡೆಯಲು ಸಾಧ್ಯವಾಗಲಿದೆ ಎಂಬುದು ವಿಪಕ್ಷಗಳ ವಾದವಾಗಿದೆ. ಈ ಎಲ್ಲಾ ಟೀಕೆಯ ನಡುವೆಯೂ ದೇವಾಲಯದ ಹಣವನ್ನು ದೇವಾಲಯದ ಅಭಿವೃದ್ಧಿಗೆ ಬಳಸಬೇಕೆಂಬುದಾಗಿ ಹಿಂದಿನಿಂದಲೂ ಪ್ರತಿಪಾದಿಸಲಾಗುತ್ತಿತ್ತು. ಇದೀಗ ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಂತಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…