ಬಂಟ್ವಾಳ: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ ಅನಿಲ್ ಜಾನ್ ಸಿಕ್ವೆರಾ ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ಬಿ ಪೂರೈಸಿದ್ದಾರೆ. ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಇವರು ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಕಾನೂನು ಪದವಿ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ರೊಂದಿಗೆ ವೃತ್ತಿ ನಿರ್ವಹಿಸುತ್ತಿದ್ದರು. ಅನಿಲ್ ಜಾನ್ ಸಿಕ್ವೆರಾ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ತಮ್ಮ ಎರಡನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.
ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೆರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆ ಅಧ್ಯಕ್ಷರಾಗಿದ್ದರು. ಅನಿಲ್ ಸಿಕೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…