Featured

25ನೇ ವಯಸ್ಸಿನಲ್ಲೇ ಅಪ್ರತಿಮ ಸಾಧನೆ – ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ  – Vishwanews24

25ನೇ ವಯಸ್ಸಿನಲ್ಲೇ ಅಪ್ರತಿಮ ಸಾಧನೆ – ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ

ಬಂಟ್ವಾಳ: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್‌ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ ಅನಿಲ್‌ ಜಾನ್‌ ಸಿಕ್ವೆರಾ ಮಂಗಳೂರಿನ ಎಸ್‌ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್‌ಎಲ್​ಬಿ ಪೂರೈಸಿದ್ದಾರೆ. ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಇವರು ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್​ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಕಾನೂನು ಪದವಿ ಬಳಿಕ ಮಂಗಳೂರಿನಲ್ಲಿ ಬಾ‌ರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ರೊಂದಿಗೆ ವೃತ್ತಿ ನಿರ್ವಹಿಸುತ್ತಿದ್ದರು. ಅನಿಲ್ ಜಾನ್ ಸಿಕ್ವೆರಾ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ತಮ್ಮ ಎರಡನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.

ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೆರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆ ಅಧ್ಯಕ್ಷರಾಗಿದ್ದರು. ಅನಿಲ್ ಸಿಕೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago