Featured

25 ವರ್ಷವಾದರೂ ರಾಮಮಂದಿರ ಕಟ್ಟಿದ್ರಾ : ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು : ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆಂಬ ಬಿಜೆಪಿ ಎಚ್ಚರಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ‘ರಥಯಾತ್ರೆ ನಡೆಸಿ ಜನರಿಂದ ಸಂಗ್ರಹಿಸಿದ ಇಟ್ಟಿಗೆ ತಿಪ್ಪೆಗೆಸೆದ್ರಿ, ಹಣ ಜೇಬಿಗಿಳಿಸಿದ್ರಿ, 25 ವರ್ಷವಾದರೂ ರಾಮಮಂದಿರ ಕಟ್ಟಿದ್ರಾ’ ಎಂದು ಪ್ರಶ್ನಿಸಿದ್ದು ವಿಧಾನ ಪರಿಷತ್ತಿನಲ್ಲಿ ಕೆಲಕಾಲ ಕೋಲಾಹಲ ಸೃಷ್ಟಿಸಿತು.

ನಾಡಿನ ಮುಖ್ಯಮಂತ್ರಿಗಳು ಕೋಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಮಾತನಾಡುವುದು ಸರಿಯಲ್ಲ. ರಾಮಮಂದಿರಕ್ಕೆ ಸಂಗ್ರಹಿಸಿದ ಇಟ್ಟಿಗೆಗಳು ತಿಪ್ಪೆಗೆ ಹೋದವು ಎಂಬ ಮಾತುಗಳನ್ನು ವಾಪಸ್ ಪಡೆಯಲೇಬೇಕು. ಸಂಗ್ರಹಿಸಿದ ಹಣ ಯಾರ ಖಾತೆಗೆ ಹೋಗಿದೆ ಎನ್ನುವುದರ ಕುರಿತು ದಾಖಲೆಗಳನ್ನು ಮುಖ್ಯಮಂತ್ರಿಗಳು ನೀಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಆಗ್ರಹಿಸಿದರು. 

ರಾಮ ಮಂದಿರ ಕಟ್ಟುವುದು ನಮ್ಮ ಅಜೆಂಡಾ. ಅದು ಇಂದಿಗೂ ಬಿಜೆಪಿಯಲ್ಲಿದೆ ನಾವು ಅದರಿಂದ ಎಂದಿಗೂ ಹಿಂದೆ ಸರಿದಿಲ್ಲ ಒಂದಷ್ಟು ಅಡೆತಡೆಗಳಿವೆ ಎಲ್ಲವನ್ನೂ ಪರಿಹರಿಸಿ ರಾಮ ಮಂದಿರವನ್ನು ಕಟ್ಟೇ ತೀರುತ್ತೇವೆ ಎಂದು ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ನಲ್ಲಿ ಗುಡುಗಿದರು. ಇನ್ನು ಮುಖ್ಯಮಂತ್ರಿಗಳ ಮಾತಿಗೆ ಉತ್ತರಿಸಿದ ಬಿಜೆಪಿಯ ಹಿರಿಯ ಸದಸ್ಯ ಕೆ ಬಿ ಶಾಣಪ್ಪ ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿದೆ. ಅದು ಇತ್ಯರ್ಥವಾಗುವವರೆಗೂ ಯಾರಿಗೂ ಅಲ್ಲಿ ಮಂದಿರ ಕಟ್ಟಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಮುಖ್ಯಮಂತ್ರಿ ಹೇಳಿಕೆ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸಭಾಪತಿ ಪೀಠದ ಬಳಿ ಧಾವಿಸಿ ಧರಣಿ ನಡೆಸಿದರೆ, ಕೊನೆಗೆ ಪ್ರತಿಪಕ್ಷದ ಒತ್ತಡಕ್ಕೆ ಮಣಿದ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆ ವಾಪಸ್‌ ಪಡೆದ ಪ್ರಸಂಗವೂ ನಡೆಯಿತು.

”ನಿಮ್ಮಿಂದ ಬುದ್ದಿ ಹೇಳಿಸಿಕೊಂಡು ಅಥವಾ ಒತ್ತಡಕ್ಕೆ ಮಣಿದು ಸಾಲ ಮನ್ನಾ ಮಾಡುವಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಸಾಲ ಮನ್ನಾ ಘೋಷಣೆಯಲ್ಲೂ ರಾಜಕೀಯ ಲಾಭ ಪಡೆಯಲು ಬಿಜೆಪಿ ಹೊರಟಿದೆ. ಆದರೆ, ಈ ಬಗ್ಗೆ ಜನರೇ ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ. ಸಮ್ಮಿಶ್ರ ಸರಕಾರ ಟೇಕಾಫ್‌ ಆಗಿಲ್ಲ ಎಂಬ ಅಪನಂಬಿಕೆ ನಿಮಗಿರಬಹುದು. ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್‌ ಜತೆ ಸೇರಿ ಅವಕಾಶವಾದಿ ರಾಜಕಾರಣ ಮಾಡುತ್ತಿಲ್ಲ. ಬದಲಿಗೆ ಹಿಂದಿನ ಕಾಂಗ್ರೆಸ್‌ ಸರಕಾರದ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

 

 

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

6 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

6 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

7 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

7 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

8 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

9 hours ago