ಬೆಂಗಳೂರು : ಬಜೆಟ್ನಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆಂಬ ಬಿಜೆಪಿ ಎಚ್ಚರಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ರಥಯಾತ್ರೆ ನಡೆಸಿ ಜನರಿಂದ ಸಂಗ್ರಹಿಸಿದ ಇಟ್ಟಿಗೆ ತಿಪ್ಪೆಗೆಸೆದ್ರಿ, ಹಣ ಜೇಬಿಗಿಳಿಸಿದ್ರಿ, 25 ವರ್ಷವಾದರೂ ರಾಮಮಂದಿರ ಕಟ್ಟಿದ್ರಾ’ ಎಂದು ಪ್ರಶ್ನಿಸಿದ್ದು ವಿಧಾನ ಪರಿಷತ್ತಿನಲ್ಲಿ ಕೆಲಕಾಲ ಕೋಲಾಹಲ ಸೃಷ್ಟಿಸಿತು.
ನಾಡಿನ ಮುಖ್ಯಮಂತ್ರಿಗಳು ಕೋಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಮಾತನಾಡುವುದು ಸರಿಯಲ್ಲ. ರಾಮಮಂದಿರಕ್ಕೆ ಸಂಗ್ರಹಿಸಿದ ಇಟ್ಟಿಗೆಗಳು ತಿಪ್ಪೆಗೆ ಹೋದವು ಎಂಬ ಮಾತುಗಳನ್ನು ವಾಪಸ್ ಪಡೆಯಲೇಬೇಕು. ಸಂಗ್ರಹಿಸಿದ ಹಣ ಯಾರ ಖಾತೆಗೆ ಹೋಗಿದೆ ಎನ್ನುವುದರ ಕುರಿತು ದಾಖಲೆಗಳನ್ನು ಮುಖ್ಯಮಂತ್ರಿಗಳು ನೀಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಆಗ್ರಹಿಸಿದರು.
ರಾಮ ಮಂದಿರ ಕಟ್ಟುವುದು ನಮ್ಮ ಅಜೆಂಡಾ. ಅದು ಇಂದಿಗೂ ಬಿಜೆಪಿಯಲ್ಲಿದೆ ನಾವು ಅದರಿಂದ ಎಂದಿಗೂ ಹಿಂದೆ ಸರಿದಿಲ್ಲ ಒಂದಷ್ಟು ಅಡೆತಡೆಗಳಿವೆ ಎಲ್ಲವನ್ನೂ ಪರಿಹರಿಸಿ ರಾಮ ಮಂದಿರವನ್ನು ಕಟ್ಟೇ ತೀರುತ್ತೇವೆ ಎಂದು ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ನಲ್ಲಿ ಗುಡುಗಿದರು. ಇನ್ನು ಮುಖ್ಯಮಂತ್ರಿಗಳ ಮಾತಿಗೆ ಉತ್ತರಿಸಿದ ಬಿಜೆಪಿಯ ಹಿರಿಯ ಸದಸ್ಯ ಕೆ ಬಿ ಶಾಣಪ್ಪ ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿದೆ. ಅದು ಇತ್ಯರ್ಥವಾಗುವವರೆಗೂ ಯಾರಿಗೂ ಅಲ್ಲಿ ಮಂದಿರ ಕಟ್ಟಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ಮುಖ್ಯಮಂತ್ರಿ ಹೇಳಿಕೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸಭಾಪತಿ ಪೀಠದ ಬಳಿ ಧಾವಿಸಿ ಧರಣಿ ನಡೆಸಿದರೆ, ಕೊನೆಗೆ ಪ್ರತಿಪಕ್ಷದ ಒತ್ತಡಕ್ಕೆ ಮಣಿದ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆ ವಾಪಸ್ ಪಡೆದ ಪ್ರಸಂಗವೂ ನಡೆಯಿತು.
”ನಿಮ್ಮಿಂದ ಬುದ್ದಿ ಹೇಳಿಸಿಕೊಂಡು ಅಥವಾ ಒತ್ತಡಕ್ಕೆ ಮಣಿದು ಸಾಲ ಮನ್ನಾ ಮಾಡುವಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಸಾಲ ಮನ್ನಾ ಘೋಷಣೆಯಲ್ಲೂ ರಾಜಕೀಯ ಲಾಭ ಪಡೆಯಲು ಬಿಜೆಪಿ ಹೊರಟಿದೆ. ಆದರೆ, ಈ ಬಗ್ಗೆ ಜನರೇ ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ. ಸಮ್ಮಿಶ್ರ ಸರಕಾರ ಟೇಕಾಫ್ ಆಗಿಲ್ಲ ಎಂಬ ಅಪನಂಬಿಕೆ ನಿಮಗಿರಬಹುದು. ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ ಜತೆ ಸೇರಿ ಅವಕಾಶವಾದಿ ರಾಜಕಾರಣ ಮಾಡುತ್ತಿಲ್ಲ. ಬದಲಿಗೆ ಹಿಂದಿನ ಕಾಂಗ್ರೆಸ್ ಸರಕಾರದ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…