Featured

2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ , ಇದು ಜನರಿಗೆ ಮೋಸ ಮಾಡುವ ತಂತ್ರ : ಯುಟಿ ಖಾದರ್  – Vishwanews24

2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ , ಇದು ಜನರಿಗೆ ಮೋಸ ಮಾಡುವ ತಂತ್ರ : ಯುಟಿ ಖಾದರ್

ಮಂಗಳೂರು: ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಸೋಮವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯ ಏನಿತ್ತು? ಸಮಿತಿ ರಚಿಸುವ ಬದಲು ರಾಜ್ಯದಲ್ಲಿ ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು,’’ ಎಂದು ಹೇಳಿದರು.

2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ, ಇದು ಜನರಿಗೆ ಮೋಸ ಮಾಡುವ ತಂತ್ರ. ಬಿಜೆಪಿ ಶಾಸಕರು ತುಳುನಾಡಿನ ಜನರಿಗೆ ಮೋಸ ಮಾಡಿದ್ದಾರೆ. ಕರಾವಳಿಯಲ್ಲಿ ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರೋವಾಗ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರೋದೇ ತುಳು ಭಾಷೆಗೆ ಮಾಡಿರುವ ಅವಮಾನ ಎಂದು ತಿಳಿಸಿದರು.

ತುಳುವಿನಲ್ಲಿ ಯಕ್ಷಗಾನ ಮತ್ತು ಲಿಪಿಯ ಬಗ್ಗೆ ಅಕಾಡೆಮಿ ಇದೆ. ಇದನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಐಚ್ಛಿಕ ವಿಷಯವಾಗಿ ಕಲಿಸಲಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಸಮಿತಿಯನ್ನು ರಚಿಸುವ ಅಗತ್ಯ ಏನಿತ್ತು? ಎಂದು ಪ್ರಶ್ನಸಿದರು.

 

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

7 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

8 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago