ಮಂಗಳೂರು: ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಸೋಮವಾರ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯ ಏನಿತ್ತು? ಸಮಿತಿ ರಚಿಸುವ ಬದಲು ರಾಜ್ಯದಲ್ಲಿ ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು,’’ ಎಂದು ಹೇಳಿದರು.
2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ, ಇದು ಜನರಿಗೆ ಮೋಸ ಮಾಡುವ ತಂತ್ರ. ಬಿಜೆಪಿ ಶಾಸಕರು ತುಳುನಾಡಿನ ಜನರಿಗೆ ಮೋಸ ಮಾಡಿದ್ದಾರೆ. ಕರಾವಳಿಯಲ್ಲಿ ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರೋವಾಗ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರೋದೇ ತುಳು ಭಾಷೆಗೆ ಮಾಡಿರುವ ಅವಮಾನ ಎಂದು ತಿಳಿಸಿದರು.
ತುಳುವಿನಲ್ಲಿ ಯಕ್ಷಗಾನ ಮತ್ತು ಲಿಪಿಯ ಬಗ್ಗೆ ಅಕಾಡೆಮಿ ಇದೆ. ಇದನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಐಚ್ಛಿಕ ವಿಷಯವಾಗಿ ಕಲಿಸಲಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಸಮಿತಿಯನ್ನು ರಚಿಸುವ ಅಗತ್ಯ ಏನಿತ್ತು? ಎಂದು ಪ್ರಶ್ನಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…