Featured

26-06-2021 : ಇಂದಿನ ದಿನ ಭವಿಷ್ಯ -Vishwanews24

26-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ

ಮಕ್ಕಳಿಗಾಗಿ ಇಂದು ನೀವು ಮಾಡುವ ಕೆಲಸಗಳು ನಿಧಾನಗತಿಯಲ್ಲಿ ಯಶಸ್ಸಾಗುವವು, ಇಂದು ನೀವು ಹಮ್ಮಿಕೊಳ್ಳುವ ಶುಭ ಕಾರ್ಯಗಳಿಗೆ ವಿರೋಧಿಗಳು ಅಡ್ಡಗಾಲು ಹಾಕುವ ಸಾಧ್ಯತೆ ಇರುವುದು.

ವೃಷಭ ರಾಶಿ

ಪರೋಪಕಾರಿಗಳಾದ ನೀವು ವಿಶ್ರಾಂತಿಯ ಅಗತ್ಯವಿಲ್ಲದಂತೆ ದುಡಿಯುತ್ತಿರುವಿರಿ. ಆದರೆ ಕೆಲ ಸಮಯವಾದರೂ ವಿಶ್ರಾಂತಿ ಪಡೆದಲ್ಲಿ ಮುಂದಿನ ಕೆಲಸವನ್ನು ಅತ್ಯುತ್ಸಾಹದಿಂದ ಮಾಡಲು ಅನುಕೂಲವಾಗುವುದು.

ಮಿಥುನ ರಾಶಿ

ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಸುದಿನ. ಭೂ ವ್ಯವಹಾರದವರಿಗೆ ಉತ್ತಮ ಲಾಭ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಕಟಕ ರಾಶಿ

ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಸಂಧಿಸುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಕಾಣದ ಹಾದಿಗಾಗಿ ಕಾತರಿಸುತ್ತಿರುವಿರಿ. ಆದರೆ ಗುರುಸದೃಶವಾದ ವ್ಯಕ್ತಿಯೊಬ್ಬರಿಂದ ಬದುಕಿನ ಶಾಂತಿಗೆ ಉತ್ತಮ ಸಿದ್ಧಿ ದೊರೆಯುವುದು.

ಸಿಂಹ ರಾಶಿ

ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.

ಕನ್ಯಾ ರಾಶಿ

ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡಿ, ಸಿಟ್ಟಿನಿಂದ ಕೂಗಾಡಲು ಮುಂದಾಗದಿರಿ. ಇದರಿಂದ ನಿಮ್ಮ ಪಾಲಿಗೆ ನೀವೇ ದೊಡ್ಡ ತಡೆಗೋಡೆ ಆಗುವಿರಿ. ಈ ಬಗ್ಗೆ ಎಚ್ಚರಿಕೆ ಇರಲಿ.

ತುಲಾ ರಾಶಿ

ಓದು ಬರಹದಿಂದ ಜ್ಞಾನ ಸಂವರ್ಧನೆಗೆ ದಾರಿ ಇದೆ. ಜ್ಞಾನ ನಿಮ್ಮ ಬದುಕಿನ ಪಾಲಿಗೆ ಕೈದೀಪವಾಗಲಿದೆ. ಜ್ಞಾನದ ಬಲದಿಂದ ಅಜ್ಞಾನದ ಕೇಡು ಎಂಬ ವಚನದಂತೆ ಬುದ್ಧಿಯ ಅಜ್ಞಾನ ಕಳೆದು ಸುಜ್ಞಾನ ಮೂಡುವುದು.

ವೃಶ್ಚಿಕ ರಾಶಿ

ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಚರರಾಶಿಯಲ್ಲಿ ಜನ್ಮಿಸಿರುವ ನೀವು ಒಂದೇ ಕಡೆ ಕುಳಿತು ಕೆಲಸ ಮಾಡುವವರಾಗಿದ್ದೀರಿ.

ಧನಸ್ಸು ರಾಶಿ

ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳು ಮಾಡಿಕೊಳ್ಳದಿರಿ.

ಮಕರ ರಾಶಿ

ಸಾಧು ಪ್ರಾಣಿಗಳನ್ನೇ ಬಲಿಕೊಡುವರೇ ಹೊರತು ಹುಲಿ ಸಿಂಹಗಳನ್ನು ಬಲಿ ಕೊಡುವುದಿಲ್ಲ. ನೀವು ಬಯಸಿದ ಮಾರ್ಗದಲ್ಲಿಯೇ ಸಾಗಬೇಕೆಂಬ ಹಠ ಬಿಟ್ಟುಬಿಡಿ. ಹಠದಿಂದ ಒಳಿತಿಗೆ ತಡೆ ಉಂಟಾಗಲಿದೆ. .

ಕುಂಭ ರಾಶಿ

ಹೊಸ ರಾಜಕೀಯ ಪಕ್ಷ ಕ್ಕೆ ಸೇರಿಕೊಳ್ಳಬೇಕೆಂಬ ನಿಮ್ಮ ಒಳಗಿನ ಆಸೆಗೆ ಹೊರಗಿನ ಜನರು ತಣ್ಣೀರು ಎರಚುತ್ತಿರುವರು. ಗ್ರಹಗಳು ನೀವು ಪಕ್ಷ ಕ್ಕೆ ಸೇರಬೇಕೆನ್ನುವವು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.

ಮೀನ ರಾಶಿ

ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ. ಎಷ್ಟೇ ಪ್ರಾಮಾಣಿಕವಾಗಿ ದುಡಿದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುತ್ತಿದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

7 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

22 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

37 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago