26/11 2008 ಭಾರತದಲ್ಲಿ ಕರಾಳ ಅಧ್ಯಾಯ ಬರೆದ ಮುಂಬೈ ಭಯೋತ್ಪಾದಕ ದಾಳಿಗೆ ಇಂದಿಗೆ 12 ವರ್ಷ ,ದೇಶಕ್ಕಾಗಿ ಜೀವ ತೆತ್ತ ಹುತಾತ್ಮರಿಗೆ ಗೌರವ -Vishwanews24

Featured, ರಾಷ್ಟ್ರ ನ್ಯೂಸ್

26/11 2008 ಭಾರತದಲ್ಲಿ ಕರಾಳ ಅಧ್ಯಾಯ ಬರೆದ ಮುಂಬೈ ಭಯೋತ್ಪಾದಕ ದಾಳಿಗೆ ಇಂದಿಗೆ 12 ವರ್ಷ ,ದೇಶಕ್ಕಾಗಿ ಜೀವ ತೆತ್ತ ಹುತಾತ್ಮರಿಗೆ ಗೌರವ -Vishwanews24

ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.

ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ಮುಂಬೈ ನಗರಕ್ಕೆ ಲಗ್ಗೆಯಿಟ್ಟಿದ್ದ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ನೆತ್ತರು ಹರಿಸಿದ್ದರು. ತಾಜ್ ಹೋಟೆಲ್ ನಲ್ಲಿದ್ದ ಜನರನ್ನು 3 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಉಗ್ರರು ಅಟ್ಟಹಾಸ ಮೆರೆದಿದ್ದರು.

ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿ 174 ಅಮಾಯಕ ಜನರನ್ನು ಬಲಿಪಡೆದುಕೊಂಡಿದ್ದರು.

ಸುಮಾರು 10 ಉಗ್ರರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಈ ಕರಾಳ ದಿನಕ್ಕೆ ಇಂದಿಗೆ 12 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಅಸುನೀಗಿದವರಿಗೆ ದೇಶದ ಜನತೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಜೀವಂತ ಸೆರೆ ಹಿಡಿದಿದ್ದ ಅಜ್ಮಲ್ ಕಸಬ್ ನನ್ನು ನಾಲ್ಕು ವರ್ಷಗಳ ಬಳಿಕ 2012ರ ನವೆಂಬರ್ 21ರಂದು ಗಲ್ಲಿಗೇರಿಸಲಾಯಿತು. ಇಂದಿಗೆ ದಾಳಿ ನಡೆದು ಹತ್ತು ವರ್ಷಗಳಾಗಿದೆ.

ಉಗ್ರರ ದಾಳಿಯ ಕರಾಳ ದಿನಗಳು ಮತ್ತೆಂದು ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು, ಕರಾಳ ದಿನ ಹಿನ್ನಲೆಯಲ್ಲಿ ಮುಂಬೈ ನಗರದಾದ್ಯಂತ ಭಾರೀ ಕಟ್ಟೆಚ್ಚರವನ್ನು ವಹಿಸಿದ್ದಾರೆ. ಮುಂಬೈ ನಗರದಾದ್ಯಂತ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿರುವ ಸರ್ಕಾರ, ನಗರವನ್ನು ಪ್ರವೇಶಿಸುವ ಪ್ರತೀಯೊಂದು ವಾಹನವನ್ನೂ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹೊಸದಾಗಿ ನಿರ್ಮಿಸಲಾದ ಹುತಾತ್ಮರ ಸ್ಮಾರಕದ ಬಳಿ ನಡೆದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್​ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್​ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್​ಮುಖ್​, ಅರಣ್ಯ ಸಚಿವ ಆದಿತ್ಯ ಠಾಕ್ರೆ ಇತರರು ಭಾಗವಹಿಸಿದ್ದರು.

ಉಗ್ರರ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ರಕ್ಷಣಾ ಪಡೆಗಳು ನಡೆಸಿದ ಹೋರಾಟವನ್ನು ನೆನಪಿಸಿಕೊಂಡರು. ಹುತಾತ್ಮರ ಸ್ಮಾರಕಕ್ಕೆ ಹೂವಿನ ಹಾರ ಹಾಕಿ, ನಮನ ಸಲ್ಲಿಸಿದರು.