Featured

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ

ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ನಡೆದು ಇಂದಿಗೆ 1 ವರ್ಷ ತುಂಬಿದೆ.

ಅಂದು 2025ರ ಜೂನ್ 12 (ಗುರುವಾರ). ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ತೆರಳಲು 171 ಏರ್ ಇಂಡಿಯಾ ಟೇಕ್ ಆಫ್ ಆಗಿತ್ತು. ಮಧ್ಯಾಹ್ನ 1:38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ಆದರೆ ದುರಾದೃಷ್ಟವೆಂದರೆ ಟೇಕ್ ಆಫ್ ಕೆಲವೇ ಸೆಕೆಂಡುಗಳಲ್ಲಿಯೇ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿ, ವಿಮಾನ ಅಪಘಾತಕ್ಕೀಡಾಯಿತು.

ದುರಂತದಲ್ಲಿ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ 241 ಮಂದಿ ಹಾಗೂ ಇತರ 19 ಜನರು ಸಾವನ್ನಪ್ಪಿದ್ದರು. ಘಟನೆ ನಡೆದು ವರ್ಷವಾದರೂ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ತನಿಖಾ ವರದಿ ಇನ್ನೂ ಸಿದ್ಧಗೊಂಡಿಲ್ಲ.

ಮಡಿದವರ ಕುಟುಂಬಗಳ ಪೈಕಿ ಶೇ.96ರಷ್ಟು ಕುಟುಂಬಗಳಿಗೆ ಇದುವರೆಗೆ ಮಧ್ಯಂತರ ಪರಿಹಾರವಾಗಿ ತಲಾ 25 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಈ ನಡುವೆ ವಿಮಾನ ಅಪಘಾತದಲ್ಲಿ ಮಡಿದವರಿಗೆ ಗೌರವ ಸಲ್ಲಿಸುವ ಸಲುವಾಗಿ ಏರ್ ಇಂಡಿಯಾ ಸಿಬ್ಬಂದಿ ಶುಕ್ರವಾರ ತಮ್ಮ ಕಾರ್ಯಸ್ಥಳಗಳಲ್ಲಿ ಮಧ್ಯಾಹ್ನ 1.39ರಿಂದ 1.41ರವರೆಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

6 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

8 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

9 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

9 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

9 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

9 hours ago