Featured

27 ವರ್ಷಗಳ ನಂತರ ದೀಪಾವಳಿಯಂದು ಸಂಭವಿಸಲಿದೆ ಸೂರ್ಯಗ್ರಹಣ… ಪರಿಣಾಮವೇನು? Vishwanews24

27 ವರ್ಷಗಳ ನಂತರ ದೀಪಾವಳಿಯಂದು ಸೂರ್ಯಗ್ರಹಣ… ಪರಿಣಾಮವೇನು?

ಈ ವರ್ಷದ ಕೊನೆಯ ಸೂರ್ಯಗ್ರಹಣವು ಅಕ್ಟೋಬರ್ 25, 2022 ರಂದು ಸಂಭವಿಸಲಿದೆ. 27 ವರ್ಷಗಳ ನಂತರ, ದೀಪಾವಳಿಯಂದು ಸೂರ್ಯ ಗ್ರಹಣ ಸಂಭವಿಸುತ್ತಿರುವುದು ವಿಶೇಷ. ದೀಪಾವಳಿಯನ್ನು ಕಾರ್ತಿಕ ಅಮಾವಾಸ್ಯೆಯಂದು ಆಚರಿಸಲಾಗುತ್ತೆ, ಈ ಬಾರಿ ಕಾರ್ತಿಕ ಅಮಾವಾಸ್ಯೆಯ ದಿನಾಂಕ ಅಂದರೆ ದೀಪಾವಳಿ ಅಕ್ಟೋಬರ್ 24 ಮತ್ತು 25 ರಂದು ಎರಡು ದಿನಗಳಲ್ಲಿದೆ. ಈ ದಿನದಂದು ಯಾವ ರಾಶಿಯವರ ಮೇಲೆ ಏನೆಲ್ಲಾ ಸಮಸ್ಯೆ ಉಂಟಾಗಲಿದೆ ಅನ್ನೋದನ್ನು ತಿಳಿಯೋಣ.

ಕಾರ್ತಿಕ ಅಮಾವಾಸ್ಯೆ ತಿಥಿ ಅಕ್ಟೋಬರ್ 24 ರಂದು ಸಂಜೆ 05:27 ಕ್ಕೆ ಪ್ರಾರಂಭವಾಗಲಿದ್ದು, ಅಕ್ಟೋಬರ್ 25 ರಂದು ಸಂಜೆ 04:18 ರವರೆಗೆ ಇರಲಿದೆ. ಸೂರ್ಯಗ್ರಹಣದ(Solar eclipse) ಸೂತಕದ ಅವಧಿಯು ಅಕ್ಟೋಬರ್ 24 ರ ಮಧ್ಯರಾತ್ರಿ 12 ಗಂಟೆಯ ಮುಂಚಿತವಾಗಿ ಪ್ರಾರಂಭವಾಗುತ್ತೆ. ಗ್ರಹಣ ದೋಷದ ಬಗ್ಗೆ, ಪರಿಣಾಮದ ಬಗ್ಗೆ ತಿಳಿದುಕೊಳ್ಳೋಣ.

ಸೂರ್ಯ ಗ್ರಹಣ 2022 ಸೂತಕದ ಅವಧಿ
ಈ ಸೂರ್ಯಗ್ರಹಣವು ಭಾಗಶಃ ಸೂರ್ಯಗ್ರಹಣವಾಗಿದೆ ಮತ್ತು ಇದು ಈ ವರ್ಷದ ಎರಡನೇ ಸೂರ್ಯಗ್ರಹಣ. ಇದರ ಸೂತಕದ ಅವಧಿ ಅಕ್ಟೋಬರ್ 24 ರಂದು ಅಂದರೆ ದೀಪಾವಳಿ ರಾತ್ರಿ 02:30ಕ್ಕೆ ಶುರು ಆಗಿ ಮರುದಿನ ಅಕ್ಟೋಬರ್ 25 ರಂದು ಸಂಜೆ 04:22 ರವರೆಗೆ ಇರಲಿದೆ.

27 ವರ್ಷಗಳ ನಂತರ ಇಂತಹ ವಿಶೇಷ ಘಟನೆ ನಡೆಯಲಿದೆ.
ಈ ಸೂರ್ಯಗ್ರಹಣವು ಭಾರತದಲ್ಲಿ ಭಾಗಶಃ ಗೋಚರಿಸುತ್ತೆ. ಇದು ಅಕ್ಟೋಬರ್ 25 ರಂದು ಮಧ್ಯಾಹ್ನ 02:29 ಕ್ಕೆ ಪ್ರಾರಂಭವಾಗಲಿದ್ದು, ಸಂಜೆ 06:32 ಕ್ಕೆ ಕೊನೆಗೊಳ್ಳಲಿದೆ. ಈ ಸೂರ್ಯಗ್ರಹಣವು 4 ಗಂಟೆ 3 ನಿಮಿಷಗಳ ಕಾಲ ಇರಲಿದೆ. 27 ವರ್ಷಗಳ ಹಿಂದೆ 1995ರಲ್ಲಿ ದೀಪಾವಳಿ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿದಾಗ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು.

PM-KISAN ನಿಧಿಯ 12ನೇ ಕಂತಿನ ಹಣ ಬಿಡುಗಡೆ .. online ನಲ್ಲಿ ಹೀಗೆ ಪರಿಶೀಲಿಸಿ – Vishwanews24

ಈ ಜನರು ಸೂರ್ಯಗ್ರಹಣವನ್ನು ನೋಡಬಾರದು 
ಈ ಸೂರ್ಯಗ್ರಹಣವು ತುಲಾ ಮತ್ತು ಸ್ವಾತಿ ನಕ್ಷತ್ರದಲ್ಲಿ ಸಂಭವಿಸುತ್ತಿದೆ. ಈ ಕಾರಣದಿಂದಾಗಿ, ಸ್ವಾತಿ ನಕ್ಷತ್ರದಲ್ಲಿ ಜನಿಸಿದ ಜನರು ಈ ಸೂರ್ಯಗ್ರಹಣವನ್ನು ನೋಡಬಾರದು. ಅಮಾವಾಸ್ಯೆ(Amavasye) ತಿಥಿಯಂದು ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತೆ, ಇದನ್ನು ಕಂಕಣ ಸೂರ್ಯಗ್ರಹಣ ಎಂದೂ ಕರೆಯಲಾಗುತ್ತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅಂತಹ ಗ್ರಹಣದಲ್ಲಿ, ಸೂರ್ಯ ಮತ್ತು ಭೂಮಿಯ ನಡುವಿನ ಅಂತರವು ಹೆಚ್ಚಾಗಿರುತ್ತೆ, ಸೂರ್ಯನ ಬೆಳಕು ಭೂಮಿಯನ್ನು ತಲುಪುವ ಮೊದಲು, ಚಂದ್ರನು ಮಧ್ಯದಲ್ಲಿ ಬರುತ್ತಾನೆ, ಇದರಿಂದಾಗಿ ಸೂರ್ಯನ ಕೆಲವು ಭಾಗವು ಮಾತ್ರ ಗೋಚರಿಸುತ್ತೆ.

 

ಸೂತಕದ ಅವಧಿಯಲ್ಲಿ ಏನು ಮಾಡಬಾರದು
1. ಸೂತಕ ಕಾಲದಲ್ಲಿ ಯಾವುದೇ ಶುಭಕಾರ್ಯ ಮಾಡಬೇಡಿ.
2. ಸೂತಕ ಕಾಲದಲ್ಲಿ ಆಹಾರ ಸೇವಿಸೋದನ್ನು ನಿಷೇಧಿಸಲಾಗಿದೆ.
3. ಈ ಸಮಯದಲ್ಲಿ, ಹಲ್ಲುಗಳನ್ನು ಸ್ವಚ್ಛಗೊಳಿಸೋದು ಮತ್ತು ಕೂದಲನ್ನು ಬಾಚುವುದನ್ನು ನಿಷೇಧಿಸಲಾಗಿದೆ.
4. ಸೂತಕದ ಅವಧಿಯಲ್ಲಿ ಗರ್ಭಿಣಿಯರು(Pregnant) ಮನೆಯಿಂದ ಹೊರಗೆ ಹೋಗೋದನ್ನು ತಪ್ಪಿಸಬೇಕು.

ಮಳವಳ್ಳಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago