Featured

27 ವರ್ಷಗಳ ನಂತರ ದೀಪಾವಳಿಯಂದು ಸಂಭವಿಸಲಿದೆ ಸೂರ್ಯಗ್ರಹಣ… ಪರಿಣಾಮವೇನು? Vishwanews24

27 ವರ್ಷಗಳ ನಂತರ ದೀಪಾವಳಿಯಂದು ಸೂರ್ಯಗ್ರಹಣ… ಪರಿಣಾಮವೇನು?

ಈ ವರ್ಷದ ಕೊನೆಯ ಸೂರ್ಯಗ್ರಹಣವು ಅಕ್ಟೋಬರ್ 25, 2022 ರಂದು ಸಂಭವಿಸಲಿದೆ. 27 ವರ್ಷಗಳ ನಂತರ, ದೀಪಾವಳಿಯಂದು ಸೂರ್ಯ ಗ್ರಹಣ ಸಂಭವಿಸುತ್ತಿರುವುದು ವಿಶೇಷ. ದೀಪಾವಳಿಯನ್ನು ಕಾರ್ತಿಕ ಅಮಾವಾಸ್ಯೆಯಂದು ಆಚರಿಸಲಾಗುತ್ತೆ, ಈ ಬಾರಿ ಕಾರ್ತಿಕ ಅಮಾವಾಸ್ಯೆಯ ದಿನಾಂಕ ಅಂದರೆ ದೀಪಾವಳಿ ಅಕ್ಟೋಬರ್ 24 ಮತ್ತು 25 ರಂದು ಎರಡು ದಿನಗಳಲ್ಲಿದೆ. ಈ ದಿನದಂದು ಯಾವ ರಾಶಿಯವರ ಮೇಲೆ ಏನೆಲ್ಲಾ ಸಮಸ್ಯೆ ಉಂಟಾಗಲಿದೆ ಅನ್ನೋದನ್ನು ತಿಳಿಯೋಣ.

ಕಾರ್ತಿಕ ಅಮಾವಾಸ್ಯೆ ತಿಥಿ ಅಕ್ಟೋಬರ್ 24 ರಂದು ಸಂಜೆ 05:27 ಕ್ಕೆ ಪ್ರಾರಂಭವಾಗಲಿದ್ದು, ಅಕ್ಟೋಬರ್ 25 ರಂದು ಸಂಜೆ 04:18 ರವರೆಗೆ ಇರಲಿದೆ. ಸೂರ್ಯಗ್ರಹಣದ(Solar eclipse) ಸೂತಕದ ಅವಧಿಯು ಅಕ್ಟೋಬರ್ 24 ರ ಮಧ್ಯರಾತ್ರಿ 12 ಗಂಟೆಯ ಮುಂಚಿತವಾಗಿ ಪ್ರಾರಂಭವಾಗುತ್ತೆ. ಗ್ರಹಣ ದೋಷದ ಬಗ್ಗೆ, ಪರಿಣಾಮದ ಬಗ್ಗೆ ತಿಳಿದುಕೊಳ್ಳೋಣ.

ಸೂರ್ಯ ಗ್ರಹಣ 2022 ಸೂತಕದ ಅವಧಿ
ಈ ಸೂರ್ಯಗ್ರಹಣವು ಭಾಗಶಃ ಸೂರ್ಯಗ್ರಹಣವಾಗಿದೆ ಮತ್ತು ಇದು ಈ ವರ್ಷದ ಎರಡನೇ ಸೂರ್ಯಗ್ರಹಣ. ಇದರ ಸೂತಕದ ಅವಧಿ ಅಕ್ಟೋಬರ್ 24 ರಂದು ಅಂದರೆ ದೀಪಾವಳಿ ರಾತ್ರಿ 02:30ಕ್ಕೆ ಶುರು ಆಗಿ ಮರುದಿನ ಅಕ್ಟೋಬರ್ 25 ರಂದು ಸಂಜೆ 04:22 ರವರೆಗೆ ಇರಲಿದೆ.

27 ವರ್ಷಗಳ ನಂತರ ಇಂತಹ ವಿಶೇಷ ಘಟನೆ ನಡೆಯಲಿದೆ.
ಈ ಸೂರ್ಯಗ್ರಹಣವು ಭಾರತದಲ್ಲಿ ಭಾಗಶಃ ಗೋಚರಿಸುತ್ತೆ. ಇದು ಅಕ್ಟೋಬರ್ 25 ರಂದು ಮಧ್ಯಾಹ್ನ 02:29 ಕ್ಕೆ ಪ್ರಾರಂಭವಾಗಲಿದ್ದು, ಸಂಜೆ 06:32 ಕ್ಕೆ ಕೊನೆಗೊಳ್ಳಲಿದೆ. ಈ ಸೂರ್ಯಗ್ರಹಣವು 4 ಗಂಟೆ 3 ನಿಮಿಷಗಳ ಕಾಲ ಇರಲಿದೆ. 27 ವರ್ಷಗಳ ಹಿಂದೆ 1995ರಲ್ಲಿ ದೀಪಾವಳಿ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿದಾಗ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು.

PM-KISAN ನಿಧಿಯ 12ನೇ ಕಂತಿನ ಹಣ ಬಿಡುಗಡೆ .. online ನಲ್ಲಿ ಹೀಗೆ ಪರಿಶೀಲಿಸಿ – Vishwanews24

ಈ ಜನರು ಸೂರ್ಯಗ್ರಹಣವನ್ನು ನೋಡಬಾರದು 
ಈ ಸೂರ್ಯಗ್ರಹಣವು ತುಲಾ ಮತ್ತು ಸ್ವಾತಿ ನಕ್ಷತ್ರದಲ್ಲಿ ಸಂಭವಿಸುತ್ತಿದೆ. ಈ ಕಾರಣದಿಂದಾಗಿ, ಸ್ವಾತಿ ನಕ್ಷತ್ರದಲ್ಲಿ ಜನಿಸಿದ ಜನರು ಈ ಸೂರ್ಯಗ್ರಹಣವನ್ನು ನೋಡಬಾರದು. ಅಮಾವಾಸ್ಯೆ(Amavasye) ತಿಥಿಯಂದು ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತೆ, ಇದನ್ನು ಕಂಕಣ ಸೂರ್ಯಗ್ರಹಣ ಎಂದೂ ಕರೆಯಲಾಗುತ್ತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅಂತಹ ಗ್ರಹಣದಲ್ಲಿ, ಸೂರ್ಯ ಮತ್ತು ಭೂಮಿಯ ನಡುವಿನ ಅಂತರವು ಹೆಚ್ಚಾಗಿರುತ್ತೆ, ಸೂರ್ಯನ ಬೆಳಕು ಭೂಮಿಯನ್ನು ತಲುಪುವ ಮೊದಲು, ಚಂದ್ರನು ಮಧ್ಯದಲ್ಲಿ ಬರುತ್ತಾನೆ, ಇದರಿಂದಾಗಿ ಸೂರ್ಯನ ಕೆಲವು ಭಾಗವು ಮಾತ್ರ ಗೋಚರಿಸುತ್ತೆ.

 

ಸೂತಕದ ಅವಧಿಯಲ್ಲಿ ಏನು ಮಾಡಬಾರದು
1. ಸೂತಕ ಕಾಲದಲ್ಲಿ ಯಾವುದೇ ಶುಭಕಾರ್ಯ ಮಾಡಬೇಡಿ.
2. ಸೂತಕ ಕಾಲದಲ್ಲಿ ಆಹಾರ ಸೇವಿಸೋದನ್ನು ನಿಷೇಧಿಸಲಾಗಿದೆ.
3. ಈ ಸಮಯದಲ್ಲಿ, ಹಲ್ಲುಗಳನ್ನು ಸ್ವಚ್ಛಗೊಳಿಸೋದು ಮತ್ತು ಕೂದಲನ್ನು ಬಾಚುವುದನ್ನು ನಿಷೇಧಿಸಲಾಗಿದೆ.
4. ಸೂತಕದ ಅವಧಿಯಲ್ಲಿ ಗರ್ಭಿಣಿಯರು(Pregnant) ಮನೆಯಿಂದ ಹೊರಗೆ ಹೋಗೋದನ್ನು ತಪ್ಪಿಸಬೇಕು.

ಮಳವಳ್ಳಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago