Featured

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ – Vishwanews24

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ

ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ  ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

 

 

 

ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ:
  • ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ
  • ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ
  • ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ

ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago