ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.
ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್ಸೈಟ್ನಲ್ಲಿ ಪ್ರಕಟಿಸಲಿದೆ.
ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…