Featured

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ – Vishwanews24

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ

ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ  ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

 

 

 

ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ:
  • ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ
  • ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ
  • ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ

ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

5 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago