ಬೇ ಓವಲ್: ನ್ಯೂಝಿಲೆಂಡ್ ವಿರುದ್ಧ ಮೂರನೇ ಏಕದಿನ ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಗಳಿಸಿದ್ದು, ಐದು ಪಂದ್ಯಗಳ ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆ 3-0 ಅಂತರದಿಂದ ವಶಪಡಿಸಿಕೊಂಡಿದೆ.
ಗೆಲುವಿಗೆ 244 ರನ್ ಗಳ ಸವಾಲನ್ನು ಪಡೆದ ಭಾರತ 43 ಓವರ್ ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 245 ರನ್ ಗಳಿಸಿತು.
ನಾಯಕ ವಿರಾಟ್ ಕೊಹ್ಲಿ 60ರನ್, ಉಪ ನಾಯಕ ರೋಹಿತ್ ಶರ್ಮಾ 62 ರನ್, ಶಿಖರ್ ಧವನ್ 28ರನ್, ಅಂಬಟಿ ರಾಯುಡು ಔಟಾಗದೆ 40 ರನ್ ಮತ್ತು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಔಟಾಗದೆ 38 ರನ್ ಗಳಿಸಿದರು.
ಶಿಖರ್ ಧವನ್ ವಿಕೆಟ್ ಉರುಳುತ್ತಿದ್ದಂತೆ ಮೈದಾನಕ್ಕಿಳಿದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮ ಜೊತೆಗೂಡಿ ಕಿವೀಸ್ ಬೌಲರ್ಗಳನ್ನು ದಂಡಿಸುವ ಮೂಲಕ ಬೌಂಡರಿಗಳ ಸುರಿಮಳೆಗೆರೆದರು.
ಈ ಜೋಡಿಯನ್ನು ಬೇರ್ಪಡಿಸಲು ಕಿವೀಸ್ ನಾಯಕ ಕೇನ್ ವಿಲಿಯಮ್ಸ್ ಮಾಡಿದ ತಂತ್ರಗಳೆಲ್ಲ ತಲೆಕೆಳಗಾಯಿತು. ಈ ನಡುವೆ ರೋಹಿತ್ ಶರ್ಮ 3 ಬೌಂಡರಿ ಹಾಗೂ 2 ಸಿಕ್ಸರ್ಗಳಿಂದ 63 ರನ್ಗಳನ್ನು ಸಿಡಿಸಿ ಸೆನೆಟರ್ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿದರೆ ನಾಯಕ ವಿರಾಟ್ ಕೊಹ್ಲಿ ಕೂಡ 60 ರನ್ ಸಿಡಿಸಿ ಬೋಲ್ಟ್ ಬೌಲಿಂಗ್ನಲ್ಲಿ ಔಟಾದರೂ ಕೂಡ ಭಾರತದಿಂದ ಗೆಲುವನ್ನು ಕಸಿದುಕೊಳ್ಳದಂತೆ ಅಂಬಾಟಿ ರಾಯ್ಡು ಹಾಗೂ ದಿನೇಶ್ ಕಾರ್ತಿಕ್ ಜವಾಬ್ದಾರಿಯನ್ನು ಹೊತ್ತುಕೊಂಡರು.
ಈ ಜೋಡಿಯು ಕೂಡ ನ್ಯೂಜಿಲೆಂಡ್ನ ಬೌಲರ್ಗಳೆದುರು ಬೌಂಡರಿಗಳ ಸುರಿಮಳೆಗೈಯ್ಯುವ ಮೂಲಕ 43 ಓವರ್ಗಳಲ್ಲೇ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ದಿನೇಶ್ ಕಾರ್ತಿಕ್ 38 ರನ್ ಗಳಿಸಿದರೆ ರಾಯ್ಡು 40 ರನ್ ಗಳಿಸಿ ಅಜೇಯರಾಗಿ ಉಳಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…