Featured

3ನೇ ಏಕದಿನ ಪಂದ್ಯ: ಭಾರತಕ್ಕೆ 7ವಿಕೆಟ್ ಗಳ ಭರ್ಜರಿ ಜಯ – Vishwanews24

ಬೇ ಓವಲ್‌:  ನ್ಯೂಝಿಲೆಂಡ್ ವಿರುದ್ಧ ಮೂರನೇ ಏಕದಿನ ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಗಳಿಸಿದ್ದು, ಐದು ಪಂದ್ಯಗಳ ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆ 3-0 ಅಂತರದಿಂದ ವಶಪಡಿಸಿಕೊಂಡಿದೆ.

ಗೆಲುವಿಗೆ 244 ರನ್ ಗಳ ಸವಾಲನ್ನು ಪಡೆದ ಭಾರತ 43 ಓವರ್ ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 245 ರನ್ ಗಳಿಸಿತು.

ನಾಯಕ ವಿರಾಟ್ ಕೊಹ್ಲಿ 60ರನ್, ಉಪ ನಾಯಕ ರೋಹಿತ್ ಶರ್ಮಾ 62 ರನ್, ಶಿಖರ್ ಧವನ್ 28ರನ್, ಅಂಬಟಿ ರಾಯುಡು ಔಟಾಗದೆ 40 ರನ್ ಮತ್ತು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಔಟಾಗದೆ 38 ರನ್ ಗಳಿಸಿದರು.

ಶಿಖರ್ ಧವನ್ ವಿಕೆಟ್ ಉರುಳುತ್ತಿದ್ದಂತೆ ಮೈದಾನಕ್ಕಿಳಿದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮ ಜೊತೆಗೂಡಿ ಕಿವೀಸ್ ಬೌಲರ್‍ಗಳನ್ನು ದಂಡಿಸುವ ಮೂಲಕ ಬೌಂಡರಿಗಳ ಸುರಿಮಳೆಗೆರೆದರು.

ಈ ಜೋಡಿಯನ್ನು ಬೇರ್ಪಡಿಸಲು ಕಿವೀಸ್ ನಾಯಕ ಕೇನ್ ವಿಲಿಯಮ್ಸ್ ಮಾಡಿದ ತಂತ್ರಗಳೆಲ್ಲ ತಲೆಕೆಳಗಾಯಿತು. ಈ ನಡುವೆ ರೋಹಿತ್ ಶರ್ಮ 3 ಬೌಂಡರಿ ಹಾಗೂ 2 ಸಿಕ್ಸರ್‍ಗಳಿಂದ 63 ರನ್‍ಗಳನ್ನು ಸಿಡಿಸಿ ಸೆನೆಟರ್ ಬೌಲಿಂಗ್‍ನಲ್ಲಿ ವಿಕೆಟ್ ಒಪ್ಪಿಸಿದರೆ ನಾಯಕ ವಿರಾಟ್ ಕೊಹ್ಲಿ ಕೂಡ 60 ರನ್ ಸಿಡಿಸಿ ಬೋಲ್ಟ್ ಬೌಲಿಂಗ್‍ನಲ್ಲಿ ಔಟಾದರೂ ಕೂಡ ಭಾರತದಿಂದ ಗೆಲುವನ್ನು ಕಸಿದುಕೊಳ್ಳದಂತೆ ಅಂಬಾಟಿ ರಾಯ್ಡು ಹಾಗೂ ದಿನೇಶ್ ಕಾರ್ತಿಕ್ ಜವಾಬ್ದಾರಿಯನ್ನು ಹೊತ್ತುಕೊಂಡರು.

ಈ ಜೋಡಿಯು ಕೂಡ ನ್ಯೂಜಿಲೆಂಡ್‍ನ ಬೌಲರ್‍ಗಳೆದುರು ಬೌಂಡರಿಗಳ ಸುರಿಮಳೆಗೈಯ್ಯುವ ಮೂಲಕ 43 ಓವರ್‍ಗಳಲ್ಲೇ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ದಿನೇಶ್ ಕಾರ್ತಿಕ್ 38 ರನ್ ಗಳಿಸಿದರೆ ರಾಯ್ಡು 40 ರನ್ ಗಳಿಸಿ ಅಜೇಯರಾಗಿ ಉಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago