Featured

3ನೇ ಏಕದಿನ ಪಂದ್ಯ: ಭಾರತಕ್ಕೆ 7ವಿಕೆಟ್ ಗಳ ಭರ್ಜರಿ ಜಯ – Vishwanews24

ಬೇ ಓವಲ್‌:  ನ್ಯೂಝಿಲೆಂಡ್ ವಿರುದ್ಧ ಮೂರನೇ ಏಕದಿನ ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಗಳಿಸಿದ್ದು, ಐದು ಪಂದ್ಯಗಳ ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆ 3-0 ಅಂತರದಿಂದ ವಶಪಡಿಸಿಕೊಂಡಿದೆ.

ಗೆಲುವಿಗೆ 244 ರನ್ ಗಳ ಸವಾಲನ್ನು ಪಡೆದ ಭಾರತ 43 ಓವರ್ ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 245 ರನ್ ಗಳಿಸಿತು.

ನಾಯಕ ವಿರಾಟ್ ಕೊಹ್ಲಿ 60ರನ್, ಉಪ ನಾಯಕ ರೋಹಿತ್ ಶರ್ಮಾ 62 ರನ್, ಶಿಖರ್ ಧವನ್ 28ರನ್, ಅಂಬಟಿ ರಾಯುಡು ಔಟಾಗದೆ 40 ರನ್ ಮತ್ತು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಔಟಾಗದೆ 38 ರನ್ ಗಳಿಸಿದರು.

ಶಿಖರ್ ಧವನ್ ವಿಕೆಟ್ ಉರುಳುತ್ತಿದ್ದಂತೆ ಮೈದಾನಕ್ಕಿಳಿದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮ ಜೊತೆಗೂಡಿ ಕಿವೀಸ್ ಬೌಲರ್‍ಗಳನ್ನು ದಂಡಿಸುವ ಮೂಲಕ ಬೌಂಡರಿಗಳ ಸುರಿಮಳೆಗೆರೆದರು.

ಈ ಜೋಡಿಯನ್ನು ಬೇರ್ಪಡಿಸಲು ಕಿವೀಸ್ ನಾಯಕ ಕೇನ್ ವಿಲಿಯಮ್ಸ್ ಮಾಡಿದ ತಂತ್ರಗಳೆಲ್ಲ ತಲೆಕೆಳಗಾಯಿತು. ಈ ನಡುವೆ ರೋಹಿತ್ ಶರ್ಮ 3 ಬೌಂಡರಿ ಹಾಗೂ 2 ಸಿಕ್ಸರ್‍ಗಳಿಂದ 63 ರನ್‍ಗಳನ್ನು ಸಿಡಿಸಿ ಸೆನೆಟರ್ ಬೌಲಿಂಗ್‍ನಲ್ಲಿ ವಿಕೆಟ್ ಒಪ್ಪಿಸಿದರೆ ನಾಯಕ ವಿರಾಟ್ ಕೊಹ್ಲಿ ಕೂಡ 60 ರನ್ ಸಿಡಿಸಿ ಬೋಲ್ಟ್ ಬೌಲಿಂಗ್‍ನಲ್ಲಿ ಔಟಾದರೂ ಕೂಡ ಭಾರತದಿಂದ ಗೆಲುವನ್ನು ಕಸಿದುಕೊಳ್ಳದಂತೆ ಅಂಬಾಟಿ ರಾಯ್ಡು ಹಾಗೂ ದಿನೇಶ್ ಕಾರ್ತಿಕ್ ಜವಾಬ್ದಾರಿಯನ್ನು ಹೊತ್ತುಕೊಂಡರು.

ಈ ಜೋಡಿಯು ಕೂಡ ನ್ಯೂಜಿಲೆಂಡ್‍ನ ಬೌಲರ್‍ಗಳೆದುರು ಬೌಂಡರಿಗಳ ಸುರಿಮಳೆಗೈಯ್ಯುವ ಮೂಲಕ 43 ಓವರ್‍ಗಳಲ್ಲೇ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ದಿನೇಶ್ ಕಾರ್ತಿಕ್ 38 ರನ್ ಗಳಿಸಿದರೆ ರಾಯ್ಡು 40 ರನ್ ಗಳಿಸಿ ಅಜೇಯರಾಗಿ ಉಳಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago