ಬೆಂಗಳೂರು: ನಗುವಿನ ಅರಸ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.
ನಗುಮೊಗದ ಒಡೆಯ ಪುನೀತ್ ಸ್ಟಾರ್ ಬ್ಯಾಕ್ಗ್ರೌಂಡ್ನಿಂದ ಬಂದಿದ್ದರೂ ಹಮ್ಮು ಬಿಮ್ಮಿಲ್ಲದೇ ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಎಲ್ಲರೂ ಪ್ರೀತಿಯಿಂದ ಅಪ್ಪು ಎಂದೇ ಕರೆಯುತ್ತಿದ್ದರು. ಅಪ್ಪು ಕಳೆದುಕೊಂಡು ಇಂದಿಗೆ ಭರ್ತಿ ಮೂರು ವರ್ಷಗಳು. ಇಂದಿಗೂ ಕೂಡಾ ಅವರನ್ನು ಕಳೆದುಕೊಂಡ ದುಃಖ ಮಾತ್ರ ಅವರ ಭಕ್ತಗಣದ ಎದೆಯಿಂದ ಮಾಸಿಲ್ಲ.
ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…