Featured

3 ತಿಂಗಳ ಬಳಿಕ ಕುಮಾರಸ್ವಾಮಿ ರಾಜೀನಾಮೆ ಬಿಎಸ್‌ವೈ ಮುಖ್ಯಮಂತ್ರಿ !!

ರಾಜ್ಯದಲ್ಲಿ‌ ಈ ಬಾರಿ ಚುನಾವಣೆಯಲ್ಲಿ‌ ಪಕ್ಕಾ ಜಾತಿ ಲೆಕ್ಕಾಚಾರ ವರ್ಕೌಟ್ ಆಗಿದ್ದು, ಲಿಂಗಾಯತರು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದು ಬಯಸಿದ್ರು. ಆದ್ರೆ ಒಕ್ಕಲಿಗರು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇ ಬೇಕೆಂದು ಪಣತೊಟ್ಟಿದ್ದರು. ಕೊನೆಗೆ‌ ಒಕ್ಕಲಿಗ ಸಮುದಾಯದ ನಿರೀಕ್ಷೆಯಂತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಲಿಂಗಾಯತ ಸ್ವಾಮೀಜಿಗಳು ಮಾತ್ರ ಅಲ್ಲೊಂದು ಇಲ್ಲೊಂದು ಹೇಳಿಕೆ ಕೊಡುತ್ತಲೇ ಇದ್ದಾರೆ.

ಇದೀಗ ರಂಭಾಪುರಿ ಮಠದ ಶ್ರೀಗಳು ಮಾತನಾಡಿದ್ದು ಅಕ್ಟೋಬರ್ ಎರಡನೇ ವಾರದಲ್ಲಿ ಸಮ್ಮಿಶ್ರ ಸರ್ಕಾರ ಉರುಳುತ್ತೆ, ಮತ್ತೇ ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ಹೇಳ್ತಿದ್ದಾರೆ. ಯಡಿಯೂರಪ್ಪ ಅವರ ಜಾತಕ ಕುಂಡಲಿಯಲ್ಲಿ ಈ ಮಹಾಯೋಗ ಇದೆ. ಹೀಗಾಗಿ ಅಕ್ಟೋಬರ್ ಎರಡನೇ ವಾರದಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ, ಅವರ ಕುಂಡಳಿ ಪ್ರಕಾರ ಅವರಿಗೆ ಯೋಗ ಇದೆ ಎಂದಿದ್ದಾರೆ. ಅಕ್ಟೋಬರ್ ಎರಡನೇ ವಾರದ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ‌ಯೋಗ ಇದೆ. ಯಡಿಯೂರಪ್ಪ ಖಂಡಿತವಾಗಿ ಮುಖ್ಯಮಂತ್ರಿಯಾಗ್ತಾರೆ, ಯಡಿಯೂರಪ್ಪರ ದಿಟ್ಟತನ ಎಲ್ಲರಿಗೂ ಮಾದರಿ, ಕಷ್ಟ ಸಹಿಸಿಕೊಂಡು ಅವರು ಮುಂದೆ ಹೋಗುತಿದ್ದಾರೆ, ಹಾಗಾಗಿ ಅವರಿಗೆ ಮುಂದೆ ಯೋಗ ಕಾದಿದೆ ಎಂದು ತುಮಕೂರಿನ ನೋಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ  ಹೇಳಿದ್ದಾರೆ.

ರಂಭಾಪುರಿ ಸ್ವಾಮೀಜಿ ಹೇಳಿರುವ ಪ್ರಕಾರ ಅಕ್ಟೋಬರ್ ಮೊದಲ ವಾರದಲ್ಲಿ ಕುಮಾರಸ್ವಾಮಿ ಸರ್ಕಾರ ಪತನ ಆಗಬೇಕಿದೆ. ಆದರೆ ಲೋಕಸಭೆ ತನಕ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಬರುವುದಿಲ್ಲ ಎಂದು ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇದನ್ನು ಕುಮಾರಸ್ವಾಮಿ ಅವರೂ ಕೂಡ  ಕೇಳಿದ್ದು, ಒಂದು ವರ್ಷ ಕಾಲ ನನ್ನನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನೂ ಬಿಜೆಪಿ ಪಕ್ಷ ಆಪರೇಷನ್ ಕಮಲ ಮಾಡುವ ಮೂಲಕ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಅಧಿಕಾರ ಹಿಡಿಯುವ ಸಂಭವ ಇದೆ ಅನ್ನೋದಕ್ಕೂ ಸಾಧ್ಯವಿಲ್ಲ. ಯಾಕಂದ್ರೆ ಒಮ್ಮೆ ಸದನದಲ್ಲಿ ವಿಶ್ವಾಸಮತ ಗೆಲುವು ಸಾಧಿಸಿದ್ರೆ ಮತ್ತೆ ಅವಿಶ್ವಾಸ ಮಂಡನೆಗೆ 6 ತಿಂಗಳ ಅಂತ ಇರಬೇಕು. ಸ್ವಾಮೀಜಿ ಹೇಳಿದ ಸಮಯ ಅದಕ್ಕೂ ಹೊಂದಾಣಿಕೆ ಆಗ್ತಿಲ್ಲ. ಒಟ್ಟಾರೆ ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಯಡಿಯೂರಪ್ಪ ಅವರ ಕುಂಡಲಿ ನೋಡಿ ಹೇಳಿದ್ರೋ ಅಥವಾ ಯಡಿಯೂರಪ್ಪ ಅವರನ್ನು ಜಾತಿ ಆಧಾರಿತವಾಗಿ ಓಲೈಸಲು ಹೇಳಿದ್ರೋ ಅನ್ನೋದು ಮೂರು ತಿಂಗಳ ಬಳಿಕವಷ್ಟೇ ಗೊತ್ತಾಗಬೇಕಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago