ನವದೆಹಲಿ:ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಮೂರು ದಿನದೊಳಗೆ ಬಾಂಬ್ ಸ್ಫೋಟಿಸಿ ಹತ್ಯೆಗೈಯಲಾಗುವುದು ಎಂದು ಲಕ್ನೋ ಪೊಲೀಸರ ಸಹಾಯವಾಣಿ ಸಂಖ್ಯೆಗೆ ಮತ್ತೊಮ್ಮೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ವರದಿಯ ಪ್ರಕಾರ, ಲಕ್ನೋ ಪೊಲೀಸ್ ಕಂಟ್ರೋಲ್ ರೂಂನ ಹೆಲ್ಪ್ ಲೈನ್ ನ ವಾಟ್ಸಪ್ ನಂಬರ್ ಗೆ ಆಗಸ್ಟ್ 2ರಂದು ಬೆದರಿಕೆ ಸಂದೇಶ ಬಂದಿರುವುದಾಗಿ ವಿವರಿಸಿದೆ. ಮೂರು ದಿನದೊಳಗೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಫೋಟಿಸಿ ಹತ್ಯೆಗೈಯಲಾವುದು ಎಂದು ಬೆದರಿಕೆಯೊಡ್ಡಲಾಗಿದೆ.
ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದು, ಸಂದೇಶ ರವಾನಿಸಿದವನ ಗುರುತು ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶಾದ್ಯಂತ ಆಗಸ್ಟ್ 15ರಂದು 75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವ ಆಚರಣೆ ನಡೆಸುವ ಮುನ್ನವೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಈ ಬೆದರಿಕೆ ಸಂದೇಶ ಬಂದಿದೆ. ಈ ಮೊದಲು ಕೂಡಾ ಹಲವಾರು ಬಾರಿ ಬೆದರಿಕೆ ಸಂದೇಶ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ ..
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…