ನವದೆಹಲಿ:ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಮೂರು ದಿನದೊಳಗೆ ಬಾಂಬ್ ಸ್ಫೋಟಿಸಿ ಹತ್ಯೆಗೈಯಲಾಗುವುದು ಎಂದು ಲಕ್ನೋ ಪೊಲೀಸರ ಸಹಾಯವಾಣಿ ಸಂಖ್ಯೆಗೆ ಮತ್ತೊಮ್ಮೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ವರದಿಯ ಪ್ರಕಾರ, ಲಕ್ನೋ ಪೊಲೀಸ್ ಕಂಟ್ರೋಲ್ ರೂಂನ ಹೆಲ್ಪ್ ಲೈನ್ ನ ವಾಟ್ಸಪ್ ನಂಬರ್ ಗೆ ಆಗಸ್ಟ್ 2ರಂದು ಬೆದರಿಕೆ ಸಂದೇಶ ಬಂದಿರುವುದಾಗಿ ವಿವರಿಸಿದೆ. ಮೂರು ದಿನದೊಳಗೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಫೋಟಿಸಿ ಹತ್ಯೆಗೈಯಲಾವುದು ಎಂದು ಬೆದರಿಕೆಯೊಡ್ಡಲಾಗಿದೆ.
ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದು, ಸಂದೇಶ ರವಾನಿಸಿದವನ ಗುರುತು ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶಾದ್ಯಂತ ಆಗಸ್ಟ್ 15ರಂದು 75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವ ಆಚರಣೆ ನಡೆಸುವ ಮುನ್ನವೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಈ ಬೆದರಿಕೆ ಸಂದೇಶ ಬಂದಿದೆ. ಈ ಮೊದಲು ಕೂಡಾ ಹಲವಾರು ಬಾರಿ ಬೆದರಿಕೆ ಸಂದೇಶ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…