ನವದೆಹಲಿ:ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಮೂರು ದಿನದೊಳಗೆ ಬಾಂಬ್ ಸ್ಫೋಟಿಸಿ ಹತ್ಯೆಗೈಯಲಾಗುವುದು ಎಂದು ಲಕ್ನೋ ಪೊಲೀಸರ ಸಹಾಯವಾಣಿ ಸಂಖ್ಯೆಗೆ ಮತ್ತೊಮ್ಮೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ವರದಿಯ ಪ್ರಕಾರ, ಲಕ್ನೋ ಪೊಲೀಸ್ ಕಂಟ್ರೋಲ್ ರೂಂನ ಹೆಲ್ಪ್ ಲೈನ್ ನ ವಾಟ್ಸಪ್ ನಂಬರ್ ಗೆ ಆಗಸ್ಟ್ 2ರಂದು ಬೆದರಿಕೆ ಸಂದೇಶ ಬಂದಿರುವುದಾಗಿ ವಿವರಿಸಿದೆ. ಮೂರು ದಿನದೊಳಗೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಫೋಟಿಸಿ ಹತ್ಯೆಗೈಯಲಾವುದು ಎಂದು ಬೆದರಿಕೆಯೊಡ್ಡಲಾಗಿದೆ.
ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದು, ಸಂದೇಶ ರವಾನಿಸಿದವನ ಗುರುತು ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇಶಾದ್ಯಂತ ಆಗಸ್ಟ್ 15ರಂದು 75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವ ಆಚರಣೆ ನಡೆಸುವ ಮುನ್ನವೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಈ ಬೆದರಿಕೆ ಸಂದೇಶ ಬಂದಿದೆ. ಈ ಮೊದಲು ಕೂಡಾ ಹಲವಾರು ಬಾರಿ ಬೆದರಿಕೆ ಸಂದೇಶ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ ..
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…