Featured

3 ಮದುವೆ – ಲಕ್ಷಾಂತರ ರೂ. ಹಣ ಪಡೆದು ವಂಚನೆ : ಖತರ್ನಾಕ್ ಮಹಿಳೆ ವಿರುದ್ಧ ಠಾಣೆ ಮೆಟ್ಟಿಲೇರಿದ ಗಂಡಂದಿರು – vishwanews24

3 ಮದುವೆ – ಲಕ್ಷಾಂತರ ರೂ. ಹಣ ಪಡೆದು ವಂಚನೆ : ಖತರ್ನಾಕ್ ಮಹಿಳೆ ವಿರುದ್ಧ ಠಾಣೆ ಮೆಟ್ಟಿಲೇರಿದ ಗಂಡಂದಿರು

ದೇವನಹಳ್ಳಿ : ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು ಎನ್ನಲಾಗಿದೆ.

ಬುಲೆಟ್ ಓಡಿಸಲು ಬರಲ್ಲ ಎಂದು ಮೊದಲ ಪತಿಗೆ ಕೈಕೊಟ್ಟಿದ್ದಳು

ಸುಧಾರಾಣಿ ಮೊದಲು ವೀರೆಗೌಡ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, ದಾಂಪತ್ಯ ಜೀವನದ ನಡುವೆಯೇ ಪತಿಗೆ ‘ಕಾರು ಮತ್ತು ಬುಲೆಟ್ ಓಡಿಸಲು ಬರಲ್ಲ’ ಎಂಬ ಕ್ಷುಲ್ಲಕ ಕಾರಣ ನೀಡಿ, ಮಕ್ಕಳನ್ನು ಹಾಗೂ ವೀರೆಗೌಡರನ್ನು ತೊರೆದು ಹೋಗಿದ್ದಳು.

ಎರಡನೇ ಪತಿಗೆ 20 ಲಕ್ಷ ರೂ. ಪಂಗನಾಮ

ಮೊದಲ ಪತಿಯಿಂದ ದೂರಾದ ಸುಧಾರಾಣಿ, ನಂತರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬುವವರನ್ನು ಸಂಪರ್ಕಿಸಿದ್ದಳು. ಗಂಡ ತೀರಿಹೋಗಿದ್ದಾರೆ ಎಂದು ಸುಳ್ಳು ಹೇಳಿ ಆತನನ್ನು ನಂಬಿಸಿ, ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗಿದ್ದಳು. ಸುಮಾರು ಒಂದೂಕಾಲು ವರ್ಷಗಳ ಕಾಲ ಅನಂತಮೂರ್ತಿ ಜೊತೆ ಸಂಸಾರ ಮಾಡಿದ್ದಳು. ಈ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಳು ಎಂದು ಆರೋಪಿಸಲಾಗಿದೆ.

ಎರಡನೇ ಪತಿಗೆ ಪಂಗನಾಮ ಹಾಕಿದ ನಂತರ ಮೂರನೇ ಮದುವೆ

ಅನಂತಮೂರ್ತಿಯಿಂದ ಹಣ ಪಡೆದ ನಂತರ ಆತನನ್ನೂ ತೊರೆದಿರುವ ಸುಧಾರಾಣಿ, ಇದೀಗ ಕನಕಪುರ ಮೂಲದ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮೊದಲ ಪತಿ ವೀರೆಗೌಡ ಮತ್ತು ಎರಡನೇ ಪತಿ ಅನಂತಮೂರ್ತಿ ಒಟ್ಟಾಗಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ತೆರಳಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಈಕೆ ಕೇವಲ ಹಣಕ್ಕಾಗಿ ಶ್ರೀಮಂತರನ್ನು ಮತ್ತು ಅಮಾಯಕರನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಾಳೆ. ಇಂತಹ ಮಹಿಳೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪತಿಯರು ಒತ್ತಾಯಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago