ಚಿಕ್ಕೋಡಿ: ಬಿಜೆಪಿ ಪಕ್ಷ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ 30 ಜನ ಶಾಸಕರು ರಾಜೀನಾಮೆ ನೀಡಲಿದ್ದು ಸರ್ಕಾರ ಬಿದ್ದರೆ ಬಿಜೆಪಿ ಪಕ್ಷ ಅಧಿಕಾರ ರಚನೆ ಮಾಡುತ್ತೆ ಎಂದು ಹುಕ್ಕೇರಿಯ ಬಿಜೆಪಿ ಶಾಸಕ, ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೆ ಆಪರೇಷನ್ ಕಮಲದ ಜವಾಬ್ದಾರಿ ನೀಡಿಲ್ಲ. ಕಾಂಗ್ರೆಸ್ ಜೆಡಿಎಸ್ ಒಳಜಗಳವನ್ನ ಆಪರೇಷನ್ ಕಮಲ ಅಂತಿದ್ದಾರೆ. ಆಪರೇಷನ್ ಕಮಲ ಮಾಡುವುದಾದರೆ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಮೂರು ತಿಂಗಳು ಹಿಂದೆ ಮಾಡಬೇಕಿತ್ತು. ಒಳ ಜಗಳದಿಂದ ಸರ್ಕಾರ ಬಿದ್ದರೆ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್ನಿಂದ ಬರುವ ಶಾಸಕರಿಗೆ ನಾವು ಸ್ವಾಗತ ಮಾಡುತ್ತೇವೆ ಎಂದರು.
ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡುತ್ತಿಲ್ಲ. ನಾಳೆ ಶಾಸಕಾಂಗ ಸಭೆ ಕರೆಯಲಾಗಿದೆ ನಾನು ಹೋಗುತ್ತೇನೆ. ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಸತೀಶ ಜಾರಕಿಹೊಳಿ ಬಂದರು ಸ್ವಾಗತ ಮಾಡುತ್ತೇವೆ. ಮುಂದಿನ 5 ವರ್ಷ ಬಿಜೆಪಿ ಸರ್ಕಾರ ರಚನೆ ಆದರೂ ನನಗೆ ಸಚಿವ ಸ್ಥಾನ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಬೇಡ ಎಂದು ರಮೇಶ ಜಾರಕಿಹೊಳಿಗೆ ಬಿಟ್ಟು ಕೊಡುವ ಅರ್ಥದಲ್ಲಿ ಪರೋಕ್ಷವಾಗಿ ಮಾತನಾಡಿದರು.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…