Featured

30 ಶಾಸಕರು ರಾಜೀನಾಮೆ ನೀಡ್ತಾರೆ ಅಂತೆ : ಕತ್ತಿ ಭವಿಷ್ಯ

ಚಿಕ್ಕೋಡಿ: ಬಿಜೆಪಿ ಪಕ್ಷ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ 30 ಜನ ಶಾಸಕರು ರಾಜೀನಾಮೆ ನೀಡಲಿದ್ದು ಸರ್ಕಾರ ಬಿದ್ದರೆ ಬಿಜೆಪಿ ಪಕ್ಷ ಅಧಿಕಾರ ರಚನೆ ಮಾಡುತ್ತೆ ಎಂದು ಹುಕ್ಕೇರಿಯ ಬಿಜೆಪಿ ಶಾಸಕ, ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೆ ಆಪರೇಷನ್ ಕಮಲದ ಜವಾಬ್ದಾರಿ ನೀಡಿಲ್ಲ. ಕಾಂಗ್ರೆಸ್ ಜೆಡಿಎಸ್ ಒಳಜಗಳವನ್ನ ಆಪರೇಷನ್ ಕಮಲ ಅಂತಿದ್ದಾರೆ. ಆಪರೇಷನ್ ಕಮಲ ಮಾಡುವುದಾದರೆ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಮೂರು ತಿಂಗಳು ಹಿಂದೆ ಮಾಡಬೇಕಿತ್ತು. ಒಳ ಜಗಳದಿಂದ ಸರ್ಕಾರ ಬಿದ್ದರೆ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್‍ನಿಂದ ಬರುವ ಶಾಸಕರಿಗೆ ನಾವು ಸ್ವಾಗತ ಮಾಡುತ್ತೇವೆ ಎಂದರು.

ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡುತ್ತಿಲ್ಲ. ನಾಳೆ ಶಾಸಕಾಂಗ ಸಭೆ ಕರೆಯಲಾಗಿದೆ ನಾನು ಹೋಗುತ್ತೇನೆ. ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಸತೀಶ ಜಾರಕಿಹೊಳಿ ಬಂದರು ಸ್ವಾಗತ ಮಾಡುತ್ತೇವೆ. ಮುಂದಿನ 5 ವರ್ಷ ಬಿಜೆಪಿ ಸರ್ಕಾರ ರಚನೆ ಆದರೂ ನನಗೆ ಸಚಿವ ಸ್ಥಾನ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಬೇಡ ಎಂದು ರಮೇಶ ಜಾರಕಿಹೊಳಿಗೆ ಬಿಟ್ಟು ಕೊಡುವ ಅರ್ಥದಲ್ಲಿ ಪರೋಕ್ಷವಾಗಿ ಮಾತನಾಡಿದರು.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

13 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

13 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

14 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

14 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

14 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

14 hours ago