Featured

370ನೇ ವಿಧಿಯನ್ನು ರದ್ದು : ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಈ ತೀರ್ಮಾನ ಸ್ವಾಗತಾರ್ಹ : ಶಾಸಕ ಹರೀಶ್ ಪೂಂಜ -Vishwanews24

ಬೆಳ್ತಂಗಡಿ: ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದ್ದು, ಭಾರತವನ್ನು ಪರಿಪೂರ್ಣ ಗಣರಾಜ್ಯಾವನ್ನಾಗಿಸಿದೆ.

ಇಂತಹ ಐತಿಹಾಸಿಕ ಕ್ಷಣಕ್ಕೆ ಇಡೀ ರಾಷ್ಟ್ರವೇ ಕಳೆದ ಏಳು ದಶಕಗಳಿಂದ ಕಾತರಿಸುತ್ತಿದ್ದು, ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಈ ತೀರ್ಮಾನ ಸ್ವಾಗತಾರ್ಹ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

75 ವರ್ಷಗಳ ಹಿಂದೆ ಜಪಾನಿನ ಹಿರೋಶಿಮಾ ಮತ್ತು ನಾಗಸಾಕಿಯಲ್ಲಿ ಅಮೇರಿಕಾದ ಅಣು ದಾಳಿಯಿಂದ ಇಡೀ ಮನುಕುಲವೇ ಸಂಕಷ್ಟಕ್ಕೆ ಒಳಗಾಗಿ ವಿನಾಶದ ಅಂಚಿಗೆ ಬಂದಿತ್ತು ಆದರೆ ಇಂದಿನ ಕೇಂದ್ರ ಸರಕಾರದ ಈ ನಿರ್ಧಾರದಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ನಾಶವಾಗಿ, ನಾಡು ಸುಭೀಕ್ಷೆಗೊಳ್ಳಲಿದೆ.

ಇಂದಿನ ಐತಿಹಾಸಿಕ ಕ್ರಮದಿಂದ ಕಾಶ್ಮೀರದ ಉಳಿವಿಗಾಗಿ ಬಲಿದಾನಗೈದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಆಶಯ ಈಡೇರಿದೆ. ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆ ಅಕ್ಷರಶಃ ನಿಜವಾಗಿದೆ. ಮಂದಿನ ದಿನಗಳಲ್ಲಾದರೂ ವಿರೋಧಿಸುವ ವಿಪಕ್ಷಗಳು ಹಾಗೂ ಸ್ವಘೋಷಿತ ಬುದ್ಧಿಜೀವಿಗಳು ಪ್ರಧಾನಮಂತ್ರಿಯವರ ಈ ಸತ್ಕಾರ್ಯದಲ್ಲಿ ಸಹಕರಿಸಿ, ಕಾಶ್ಮೀರದ ಐತಿಹಾಸಿಕ ಗತವೈಭವವನ್ನು ಮರಳಿ ಸ್ಥಾಪಿಸುವಲ್ಲಿ ನೆರವಾಗಲಿ ಎಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago