ಬೆಳ್ತಂಗಡಿ: ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದ್ದು, ಭಾರತವನ್ನು ಪರಿಪೂರ್ಣ ಗಣರಾಜ್ಯಾವನ್ನಾಗಿಸಿದೆ.
ಇಂತಹ ಐತಿಹಾಸಿಕ ಕ್ಷಣಕ್ಕೆ ಇಡೀ ರಾಷ್ಟ್ರವೇ ಕಳೆದ ಏಳು ದಶಕಗಳಿಂದ ಕಾತರಿಸುತ್ತಿದ್ದು, ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಈ ತೀರ್ಮಾನ ಸ್ವಾಗತಾರ್ಹ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.
75 ವರ್ಷಗಳ ಹಿಂದೆ ಜಪಾನಿನ ಹಿರೋಶಿಮಾ ಮತ್ತು ನಾಗಸಾಕಿಯಲ್ಲಿ ಅಮೇರಿಕಾದ ಅಣು ದಾಳಿಯಿಂದ ಇಡೀ ಮನುಕುಲವೇ ಸಂಕಷ್ಟಕ್ಕೆ ಒಳಗಾಗಿ ವಿನಾಶದ ಅಂಚಿಗೆ ಬಂದಿತ್ತು ಆದರೆ ಇಂದಿನ ಕೇಂದ್ರ ಸರಕಾರದ ಈ ನಿರ್ಧಾರದಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ನಾಶವಾಗಿ, ನಾಡು ಸುಭೀಕ್ಷೆಗೊಳ್ಳಲಿದೆ.
ಇಂದಿನ ಐತಿಹಾಸಿಕ ಕ್ರಮದಿಂದ ಕಾಶ್ಮೀರದ ಉಳಿವಿಗಾಗಿ ಬಲಿದಾನಗೈದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಆಶಯ ಈಡೇರಿದೆ. ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆ ಅಕ್ಷರಶಃ ನಿಜವಾಗಿದೆ. ಮಂದಿನ ದಿನಗಳಲ್ಲಾದರೂ ವಿರೋಧಿಸುವ ವಿಪಕ್ಷಗಳು ಹಾಗೂ ಸ್ವಘೋಷಿತ ಬುದ್ಧಿಜೀವಿಗಳು ಪ್ರಧಾನಮಂತ್ರಿಯವರ ಈ ಸತ್ಕಾರ್ಯದಲ್ಲಿ ಸಹಕರಿಸಿ, ಕಾಶ್ಮೀರದ ಐತಿಹಾಸಿಕ ಗತವೈಭವವನ್ನು ಮರಳಿ ಸ್ಥಾಪಿಸುವಲ್ಲಿ ನೆರವಾಗಲಿ ಎಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…